ಬ್ರೇಕಿಂಗ್ ನ್ಯೂಸ್
09-10-21 03:51 pm Mangalore Reporter ಕರಾವಳಿ
ಉಳ್ಳಾಲ, ಅ.9 : ಕಾಶ್ಮೀರದಲ್ಲಿ ಹಿಂದುಗಳ ಹತ್ಯೆ ಮತ್ತು ಹಿಂಸಾಚಾರವನ್ನ ಖಂಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡದ ವತಿಯಿಂದ ತೊಕ್ಕೊಟ್ಟಿನಲ್ಲಿ ಜಿಹಾದಿ ಪ್ರತಿಕೃತಿಯನ್ನ ದಹಿಸಿ ಪ್ರತಿಭಟನೆ ನಡೆಸಲಾಯಿತು.
ಹಿಂದು ಸಂಘಟನೆ ಮುಖಂಡ ಆಶಿಕ್ ಮಾಡೂರು ಮಾತನಾಡಿ, ಕಾಶ್ಮೀರದಲ್ಲಿ ಆರ್ಟಿಕಲ್ 370 ಕಾಯ್ದೆಯನ್ನ ರದ್ದು ಮಾಡಿದ ಪರಿಣಾಮ ಪಾಕಿಸ್ಥಾನಿ ಜಿಹಾದಿಗಳು, ಕಾಶ್ಮೀರದ ಮುಸ್ಲಿಂ ಮೂಲಭೂತವಾದಿಗಳಲ್ಲಿ ನಡುಕ ಹುಟ್ಟಿದೆ. ಅದಕ್ಕಾಗಿ ಈಗ ಅಲ್ಲಿನ ಹಿಂದುಗಳನ್ನ ಹುಡುಕಿ ಹತ್ಯೆ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರಿಗೆ ವಿಶ್ವ ಹಿಂದು ಪರಿಷತ್ ಬಜರಂಗದಳ ಸದಾ ನೈತಿಕ ಬೆಂಬಲ ನೀಡುತ್ತದೆ. ಎಂಬತ್ತು ಶೇಕಡ ಹಿಂದೂಗಳು ಜಾತಿ ಭೇದ ಮರೆತು ಒಂದಾಗಿ ಜಿಹಾದಿಗಳ ವಿರುದ್ಧ ಸೆಟೆದು ನಿಂತರೆ ಭಾರತದಲ್ಲಿ ನೆಲೆಸುವ ಪ್ರತಿಯೊಬ್ಬರೂ ವಂದೇ ಮಾತರಂ, ಜೈ ಶ್ರೀರಾಂ ಹೇಳಲೇಬೇಕಾದ ಕಾಲ ಬರುತ್ತದೆ ಎಂದರು.

ಭಾರತ ಸ್ವಾತಂತ್ರ್ಯಗೊಂಡ ಸಂದರ್ಭದಲ್ಲಿ ಪಾಕಿಸ್ಥಾನ, ಭಾರತ ಎಂದು ದೇಶವನ್ನ ವಿಂಗಡಿಸಲಾಯಿತು. ಆದರೂ ಇಂದಿಗೂ ಮೂವತ್ತು ಶೇಕಡ ಕಾಶ್ಮೀರ ನಮ್ಮ ಕೈ ತಪ್ಪಲು ಯಾರು ಕಾರಣರೆಂದು ದೇಶದ ಜನರಿಗೆ ತಿಳಿದಿದೆ ಎಂದರು.

ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮಾತನಾಡಿ ಕಾಶ್ಮೀರಿ ಪಂಡಿತರನ್ನ ಅಲ್ಲಿನ ಮೂಲ ನಿವಾಸಿಗಳೆಂದು ಪರಿಗಣಿಸಿದರೂ ಸಹ ಅಲ್ಲಿನ ಮುಸ್ಲಿಂ ಮೂಲಭೂತವಾದಿಗಳು, ಜಿಹಾದಿಗಳು ಹಿಂದೂಗಳ ಹತ್ಯೆ ನಡೆಸುತ್ತಿದ್ದಾರೆ. ಕಾಶ್ಮೀರದಲ್ಲಿ ಅರಾಜಕತೆ ಸೃಷ್ಟಿಸಿದ ಕ್ರಿಮಿಗಳಿಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.

ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷ ನಾರಾಯಣ ಕುಂಪಲ, ಗೌರವಾಧ್ಯಕ್ಷರಾದ ಹರಿದಾಸ್ ಮಾಡೂರು, ಪ್ರಮುಖರಾದ ಪದ್ಮನಾಭ ಮರ್ಕೆದು, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಮುಖರಾದ ಪುರುಷೋತ್ತಮ ಕಲ್ಲಾಪು, ಸತೀಶ್ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
Bajrang Dal had given a nation wide call to hold protests against the assassination of Hindus and atrocities heaped on them in Kashmir.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm