ಬ್ರೇಕಿಂಗ್ ನ್ಯೂಸ್
10-10-21 08:29 pm Mangalore Reporter ಕರಾವಳಿ
ಮಂಗಳೂರು, ಅ.10 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮ, ದೇವರ ಹೆಸರಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ದಿನ ನಿತ್ಯ ನಡೆಸುತ್ತಿರುವ ಅನೈತಿಕ ಗೂಂಡಾಗಿರಿ ಅನ್ನೋದು ಚುನಾವಣಾ ಮುನ್ನೆಲೆಯ ತಯಾರಿ. ಈ ಮಾದರಿಯ ಅನೈತಿಕ ಗೂಂಡಾಗಿರಿಯ ಹಿಂದೆ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಭರತ್ ಶೆಟ್ಟಿ ಕೈವಾಡವಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದರು.
ಅನೈತಿಕ ಗೂಂಡಾಗಿರಿ ಖಂಡಿಸಿ ನಗರದ ಕ್ಲಾಕ್ ಟವರ್ ಬಳಿ ಡಿವೈಎಫ್ಐ ಮಂಗಳೂರು ನಗರ ಸಮಿತಿ ಆಯೋಜಿಸಿದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಂಘ ಪರಿವಾರ ಅಮಾಯಕ ವಿದ್ಯಾರ್ಥಿ ಯುವಜನರ ಮೇಲೆ ಹಲ್ಲೆ ನಡೆಸುವ ಮೂಲಕ ಗೂಂಡಾಗಿರಿ ನಡೆಸಿ ಜಿಲ್ಲೆಯ ಕೋಮು ಸಾಮರಸ್ಯವನ್ನು ಹಾಳುಗೆಡವಲು ಪ್ರಯತ್ನಿಸುತ್ತಿದೆ. ಜಿಲ್ಲೆಯ ಪೊಲೀಸ್ ಇಲಾಖೆ ಈ ರೀತಿ ಗೂಂಡಾಗಿರಿ ನಡೆಸುವವರ ಮೇಲೆ ಯಾವುದೇ ಕ್ರಮವನ್ನು ಕೈಗೊಳ್ಳದೆ ಸಂಘ ಪರಿವಾರಕ್ಕೆ ಸಂಪೂರ್ಣ ಶರಣಾಗತಿಯಾದಂತೆ ವರ್ತಿಸುತ್ತಿದೆ. ಬಿಜೆಪಿ ಧರ್ಮ, ದೇವರ ಹೆಸರಲ್ಲಿ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಅವರ ಗಮನವನ್ನು ತಮ್ಮನ್ನು ಕಾಡುವ ಮೂಲ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ. ಜಿಲ್ಲೆಯಲ್ಲಿ ಉದ್ಯೋಗದ ಪ್ರಶ್ನೆ, ಆರೋಗ್ಯದ ಪ್ರಶ್ನೆ , ಶಿಕ್ಷಣದ ಹೆಸರಲ್ಲಿ ನಡೆಸುವ ದಂಧೆಗಳ ವಿರುದ್ಧ ಯಾವೊಂದು ವಿಚಾರಗಳನ್ನು ಬಿಜೆಪಿ ಇತ್ಯರ್ಥ ಪಡಿಸಲು ಗಮನಹರಿಸುತ್ತಿಲ್ಲ. ಕೇವಲ ಜನರನ್ನು ಪರಸ್ಪರ ಎತ್ತಿಕಟ್ಟಿ ಸಂಘರ್ಷಕ್ಕೆ , ಕೋಮು ಹಿಂಸೆಗೆ ಪ್ರೇರಣೆ ಮೂಡಿಸಲು, ಆಮೂಲಕ ಪರೋಕ್ಷವಾಗಿ ಸಾಮಾನ್ಯ ಜನರ ಸಾವು, ನೋವನ್ನು ಬಯಸುವ ಪ್ರಯತ್ನದಲ್ಲಿದೆ. ಇಂತಹ ಪ್ರಯತ್ನಗಳಿಗೆ ಜಿಲ್ಲೆಯ ಪ್ರಜ್ಞಾವಂತ ಜನ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬಾರದು ಎಂದರು.

ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜೆಡಿಎಸ್ ಮಹಿಳಾ ಮುಖಂಡರಾದ ಸುಮತಿ ಎಸ್ ಹೆಗ್ಡೆ, ಮನೋಜ್ ವಾಮಂಜೂರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷರಾದ ರಫೀಕ್ ಹರೇಕಳ, ಕಾರ್ಯದರ್ಶಿ ಸುನಿಲ್ ತೇವುಲ, ಡಾ.ಕೃಷ್ಣಪ್ಪ ಕೊಂಚಾಡಿ, ಜೇರಾಲ್ಡ್ ಟವರ್, ಯಾದವ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಅಲ್ತಾಫ್ ತುಂಬೆ, ಕೃಷ್ಣ ತಣ್ಣೀರುಬಾವಿ ಮುಂತಾದವರು ಉಪಸ್ಥಿತರಿದ್ದರು.
reason behind moral policing is nalin kumar kateel and bharath shetty says DYFI president muneer kaatipalla
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm