ಬ್ರೇಕಿಂಗ್ ನ್ಯೂಸ್
15-10-21 01:27 pm Mangaluru correspondent ಕರಾವಳಿ
ಮಂಗಳೂರು, ಅ.15: ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ತಾಯಿ ಹೆರಿಗೆ ವೇಳೆ ಹೆಣ್ಣಾಗಿದ್ದ ಮಗುವನ್ನು ಡಿಸ್ಚಾರ್ಜ್ ಮಾಡಿದಾಗ ಗಂಡಾಗಿದ್ದ ವಿಚಾರ ಬೆಳಕಿಗೆ ಬಂದಿದ್ದು, ಆಸ್ಪತ್ರೆ ಸಿಬಂದಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಬಂದರು ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದಾರೆ.
ಕುಂದಾಪುರ ಮೂಲದ 27 ವರ್ಷದ ಸಮ್ರೀನ್ ಎಂಬ ಮಹಿಳೆಯನ್ನು ಸೆ.27ರಂದು ಲೇಡಿಗೋಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂಬತ್ತು ತಿಂಗಳು ಪೂರ್ತಿಯಾಗದಿದ್ದರೂ, ಮಹಿಳೆಗೆ ಬಿಪಿ ಸಮಸ್ಯೆ ಇದ್ದುದರಿಂದ ಅದೇ ದಿನ ರಾತ್ರಿ ಆಪರೇಶನ್ ಮೂಲಕ ಹೆರಿಗೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮಗುವನ್ನು ಹೆಣ್ಣೆಂದು ಆಸ್ಪತ್ರೆ ಸಿಬಂದಿ ತಿಳಿಸಿದ್ದರು. ಪೂರ್ತಿ ಬೆಳೆದಿರದ ಕಾರಣ ಮಗುವನ್ನು ಸಹಜವಾಗೇ ಐಸಿಯು ಘಟಕದಲ್ಲಿ ಇಡಲಾಗಿತ್ತು.

ಆದರೆ, 18 ದಿನ ಕಳೆದರೂ ಮಗುವಿನ ಆರೋಗ್ಯ ಸ್ಥಿತಿ ಸುಧಾರಣೆ ಆಗಿರಲಿಲ್ಲ. ಹೀಗಾಗಿ ಪೋಷಕರು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿ, ಅ.14ರಂದು ಲೇಡಿಗೋಷನ್ ಆಸ್ಪತ್ರೆಯಿಂದ ಬಿಡುಗಡೆ ಮಾಡಿಸಿದ್ದರು. ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಮಗುವನ್ನು ಆಂಬುಲೆನ್ಸ್ ಮೂಲಕ ಒಯ್ಯಲಾಗಿತ್ತು. ಆದರೆ, ಅಲ್ಲಿ ತೆರಳಿ ನೋಡಿದರೆ, ಸಿಬಂದಿ ಕಳಿಸಿಕೊಟ್ಟಿದ್ದ ಮಗು ಹೆಣ್ಣಾಗಿತ್ತು. ಇದರಿಂದ ಆತಂಕಕ್ಕೀಡಾದ ಪೋಷಕರು ಮಗುವನ್ನು ಮರಳಿ, ಲೇಡಿಗೋಷನ್ ಆಸ್ಪತ್ರೆಗೆ ತಂದು ವೈದ್ಯರನ್ನು ತರಾಟೆಗೆತ್ತಿಕೊಂಡಿದ್ದಾರೆ.
ನೀವು ನೀಡಿದ ದಾಖಲೆಗಳಲ್ಲಿಯೂ ಮಗುವನ್ನು ಹೆಣ್ಣೆಂದು ತೋರಿಸಿದ್ದೀರಿ. 18 ದಿನಗಳಿಂದ ನಮಗೂ ಅದೇ ಮಾತನ್ನು ಹೇಳಿದ್ದು, ನಾವದನ್ನು ನಂಬಿದ್ದೆವು. ಆರೋಗ್ಯ ಪೂರ್ಣವಾಗಿಲ್ಲವೆಂದು ಚಿಕಿತ್ಸೆ ನೀಡಲಾಗಿತ್ತು. ಆದರೆ, ಈಗ ಮಗುವನ್ನು ನೋಡಿದರೆ ಅದಕ್ಕೆ ಜನನದಲ್ಲೇ ಸಮಸ್ಯೆ ಇದೆ. ಮಲದ್ವಾರ ಇಲ್ಲದಿರುವುದು ಕಂಡುಬಂದಿದ್ದು, ಇದಕ್ಕೆ ಯಾರು ಹೊಣೆ. ಮಗುವಿಗೆ ಈ ರೀತಿ ಯಾವುದೇ ಸಮಸ್ಯೆ ಇದ್ದರೂ ಹೇಳಬೇಕಿತ್ತು. ಹೆಣ್ಣು ಮಗುವೆಂದು ಹೇಳಿ, ಈಗ ಗಂಡು ಮಗುವನ್ನು ಕೊಟ್ಟಿದ್ದರ ಹಿಂದೆ ನಿಮ್ಮ ಅಜೆಂಡಾ ಏನಿದೆ ಎಂದು ಮಗುವಿನ ತಂದೆ ಮುಸ್ತಫಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಈ ಬಗ್ಗೆ ಮಾಹಿತಿ ಪಡೆದ ಮೂಲ್ಕಿಯ ಆಪತ್ಬಾಂಧವ ಆಸಿಫ್ ಮತ್ತಿತರ ಸಾಮಾಜಿಕ ಕಾರ್ಯಕರ್ತರು ಲೇಡಿಗೋಷನ್ ಆಸ್ಪತ್ರೆಗೆ ಬಂದು ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಗು ಅದಲು ಬದಲು ಮಾಡಿದ್ದರ ಹಿಂದೆ ಏನೋ ಅಜೆಂಡಾ ಇದ್ದಂತಿದೆ. ಸಿಬಂದಿಯೇ ಬದಲಿಸಿ ಕೊಟ್ಟಿದ್ದಾರೆಯೇ ಎನ್ನುವ ಅನುಮಾನ ಇದೆ. ಈ ಬಗ್ಗೆ ತನಿಖೆಯಾಗಬೇಕು. ಅಲ್ಲದೆ, ಮಗುವಿನ ಪೋಷಕರ ದೃಢೀಕರಣಕ್ಕಾಗಿ ಡಿಎನ್ಎ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
A family from Kundapur has alleged bungling by the doctors of Lady Goschen Hospital here. The parents claim that the hospital had issued records during the delivery, confirming that the newborn was female. However, after 18 days, when the child was taken to another hospital for advanced treatment, they came to know that their baby was male. This has given rise to a sense of indignation and suspicion in them.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm