ಬ್ರೇಕಿಂಗ್ ನ್ಯೂಸ್
18-10-21 02:53 pm Mangaluru Correspondent ಕರಾವಳಿ
ಪುತ್ತೂರು, ಅ.18: ವೃದ್ಧ ದಂಪತಿ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಭಟ್ಟ (84) ಮತ್ತು ಅವರ ಪತ್ನಿ ಶಾರದಾ (78) ಮೃತರು. ಇವರು ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ಮಕ್ಕಳ ಜೊತೆ ಕೃಷಿ ಮಾಡಿಕೊಂಡು ವಾಸವಿದ್ದರು. ಮೇಲಂತಸ್ತು ಹೊಂದಿರುವ ಮನೆಯಲ್ಲಿ ಮೇಲ್ಗಡೆ ಮಗ ಮತ್ತು ಆತನ ಪತ್ನಿ ಇದ್ದರೆ, ಕೆಳಗಡೆ ಕೋಣೆಯಲ್ಲಿ ವೃದ್ಧ ದಂಪತಿ ಮಲಗುತ್ತಿದ್ದರು. ನಿನ್ನೆ ರಾತ್ರಿ ಅದೇ ರೀತಿ ಕೆಳಗಡೆ ಕೋಣೆಯಲ್ಲಿ ಮಲಗಿದ್ದವರು ಇಂದು ಬೆಳಗ್ಗಿನ ಹೊತ್ತಿಗೆ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಈ ಬಗ್ಗೆ ಮೃತರ ಮಗ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ತಂದೆ, ತಾಯಿಗೆ ವಯೋಸಹಜ ಕಾಯಿಲೆ ಇತ್ತು. ಅಲ್ಲದೆ, ಸಕ್ಕರೆ ಕಾಯಿಲೆಯೂ ಇತ್ತು. ಬಳಲುತ್ತಿದ್ದ ಕಾರಣ ಮನನೊಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ಪತ್ನಿ ಎದ್ದು ನೋಡಿದಾಗ ಕೆಳಗಿನ ಅಕ್ಕಪಕ್ಕದ ಕೋಣೆಯಲ್ಲಿ ಇಬ್ಬರೂ ಪ್ರತ್ಯೇಕವಾಗಿ ನೇಣು ಹಾಕ್ಕೊಂಡಿದ್ದರು. ಈ ಸಾವಿನಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಆದರೆ, ಸ್ಥಳೀಯವಾಗಿ ಗೌರವ ಹೊಂದಿದ್ದ ವೃದ್ಧ ದಂಪತಿ ಇಳಿ ವಯಸ್ಸಿನಲ್ಲಿ ಈ ರೀತಿ ಸಾವಿಗೆ ಶರಣಾಗಿದ್ದು ಪರಿಸರದಲ್ಲಿ ಅಚ್ಚರಿ ಮೂಡಿಸಿದೆ.
Puttur Elderly Couple commit Suicide due to health issues.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
03-10-25 02:11 pm
Mangalore Correspondent
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm