ಬ್ರೇಕಿಂಗ್ ನ್ಯೂಸ್
18-10-21 02:53 pm Mangaluru Correspondent ಕರಾವಳಿ
ಪುತ್ತೂರು, ಅ.18: ವೃದ್ಧ ದಂಪತಿ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಭಟ್ಟ (84) ಮತ್ತು ಅವರ ಪತ್ನಿ ಶಾರದಾ (78) ಮೃತರು. ಇವರು ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ಮಕ್ಕಳ ಜೊತೆ ಕೃಷಿ ಮಾಡಿಕೊಂಡು ವಾಸವಿದ್ದರು. ಮೇಲಂತಸ್ತು ಹೊಂದಿರುವ ಮನೆಯಲ್ಲಿ ಮೇಲ್ಗಡೆ ಮಗ ಮತ್ತು ಆತನ ಪತ್ನಿ ಇದ್ದರೆ, ಕೆಳಗಡೆ ಕೋಣೆಯಲ್ಲಿ ವೃದ್ಧ ದಂಪತಿ ಮಲಗುತ್ತಿದ್ದರು. ನಿನ್ನೆ ರಾತ್ರಿ ಅದೇ ರೀತಿ ಕೆಳಗಡೆ ಕೋಣೆಯಲ್ಲಿ ಮಲಗಿದ್ದವರು ಇಂದು ಬೆಳಗ್ಗಿನ ಹೊತ್ತಿಗೆ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಈ ಬಗ್ಗೆ ಮೃತರ ಮಗ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ತಂದೆ, ತಾಯಿಗೆ ವಯೋಸಹಜ ಕಾಯಿಲೆ ಇತ್ತು. ಅಲ್ಲದೆ, ಸಕ್ಕರೆ ಕಾಯಿಲೆಯೂ ಇತ್ತು. ಬಳಲುತ್ತಿದ್ದ ಕಾರಣ ಮನನೊಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ಪತ್ನಿ ಎದ್ದು ನೋಡಿದಾಗ ಕೆಳಗಿನ ಅಕ್ಕಪಕ್ಕದ ಕೋಣೆಯಲ್ಲಿ ಇಬ್ಬರೂ ಪ್ರತ್ಯೇಕವಾಗಿ ನೇಣು ಹಾಕ್ಕೊಂಡಿದ್ದರು. ಈ ಸಾವಿನಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಆದರೆ, ಸ್ಥಳೀಯವಾಗಿ ಗೌರವ ಹೊಂದಿದ್ದ ವೃದ್ಧ ದಂಪತಿ ಇಳಿ ವಯಸ್ಸಿನಲ್ಲಿ ಈ ರೀತಿ ಸಾವಿಗೆ ಶರಣಾಗಿದ್ದು ಪರಿಸರದಲ್ಲಿ ಅಚ್ಚರಿ ಮೂಡಿಸಿದೆ.
Puttur Elderly Couple commit Suicide due to health issues.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm