ಬ್ರೇಕಿಂಗ್ ನ್ಯೂಸ್
18-10-21 02:53 pm Mangaluru Correspondent ಕರಾವಳಿ
ಪುತ್ತೂರು, ಅ.18: ವೃದ್ಧ ದಂಪತಿ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಭಟ್ಟ (84) ಮತ್ತು ಅವರ ಪತ್ನಿ ಶಾರದಾ (78) ಮೃತರು. ಇವರು ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ಮಕ್ಕಳ ಜೊತೆ ಕೃಷಿ ಮಾಡಿಕೊಂಡು ವಾಸವಿದ್ದರು. ಮೇಲಂತಸ್ತು ಹೊಂದಿರುವ ಮನೆಯಲ್ಲಿ ಮೇಲ್ಗಡೆ ಮಗ ಮತ್ತು ಆತನ ಪತ್ನಿ ಇದ್ದರೆ, ಕೆಳಗಡೆ ಕೋಣೆಯಲ್ಲಿ ವೃದ್ಧ ದಂಪತಿ ಮಲಗುತ್ತಿದ್ದರು. ನಿನ್ನೆ ರಾತ್ರಿ ಅದೇ ರೀತಿ ಕೆಳಗಡೆ ಕೋಣೆಯಲ್ಲಿ ಮಲಗಿದ್ದವರು ಇಂದು ಬೆಳಗ್ಗಿನ ಹೊತ್ತಿಗೆ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಈ ಬಗ್ಗೆ ಮೃತರ ಮಗ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ತಂದೆ, ತಾಯಿಗೆ ವಯೋಸಹಜ ಕಾಯಿಲೆ ಇತ್ತು. ಅಲ್ಲದೆ, ಸಕ್ಕರೆ ಕಾಯಿಲೆಯೂ ಇತ್ತು. ಬಳಲುತ್ತಿದ್ದ ಕಾರಣ ಮನನೊಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ಪತ್ನಿ ಎದ್ದು ನೋಡಿದಾಗ ಕೆಳಗಿನ ಅಕ್ಕಪಕ್ಕದ ಕೋಣೆಯಲ್ಲಿ ಇಬ್ಬರೂ ಪ್ರತ್ಯೇಕವಾಗಿ ನೇಣು ಹಾಕ್ಕೊಂಡಿದ್ದರು. ಈ ಸಾವಿನಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಆದರೆ, ಸ್ಥಳೀಯವಾಗಿ ಗೌರವ ಹೊಂದಿದ್ದ ವೃದ್ಧ ದಂಪತಿ ಇಳಿ ವಯಸ್ಸಿನಲ್ಲಿ ಈ ರೀತಿ ಸಾವಿಗೆ ಶರಣಾಗಿದ್ದು ಪರಿಸರದಲ್ಲಿ ಅಚ್ಚರಿ ಮೂಡಿಸಿದೆ.
Puttur Elderly Couple commit Suicide due to health issues.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm