ಬ್ರೇಕಿಂಗ್ ನ್ಯೂಸ್
11-09-20 02:18 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 11: ಭಾರೀ ಮಳೆ ಮತ್ತು ಗಾಳಿಯಿಂದಾಗಿ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೀನುಗಾರಿಕಾ ಬೋಟ್ ನಲ್ಲಿದ್ದ 24 ಮಂದಿಯನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಭಟ್ಕಳದಿಂದ ತೆರಳಿದ್ದ ಬೋಟ್ ಗಾಳಿಮಳೆಗೆ ಮುಳುಗುವ ಭೀತಿ ಎದುರಾಗಿತ್ತು. ಅಲ್ಲದೆ, ಬೋಟಿನಲ್ಲಿ ತಾಂತ್ರಿಕ ತೊಂದರೆಯೂ ಕಾಣಿಸಿಕೊಂಡಿದ್ದರಿಂದ ಮೀನುಗಾರರು ಮೀನುಗಾರಿಕಾ ಇಲಾಖೆಗೆ ರಕ್ಷಣೆ ಮಾಡುವಂತೆ ಮನವಿ ಮಾಡಿದ್ದರು. ಭಟ್ಕಳದಿಂದ 17 ನಾಟಿಕಲ್ ಮೈಲ್ ದೂರದಲ್ಲಿ ಘಟನೆ ನಡೆದಿತ್ತು.
ಭಾರತೀಯ ತಟರಕ್ಷಣಾ ಪಡೆಯ ಕಸ್ತೂರಬಾ ಗಾಂಧಿ ಹಡಗಿನ ಮೂಲಕ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಎಲ್ಲ 24 ಮಂದಿಯನ್ನು ಸುರಕ್ಷಿತವಾಗಿ ಸಮುದ್ರ ತೀರಕ್ಕೆ ಕರೆತಂದಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ಖಮರುಲ್ ಬಹಾರ್ ಹೆಸರಿನ ಬೋಟ್, ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಗಾಳಿ ಮಳೆ ಹೊಡೆತಕ್ಕೆ ಸಿಲುಕಿ ಅಪಾಯದಲ್ಲಿತ್ತು . ಬೋಟ್ ಮಾಲೀಕರು ಮೀನುಗಾರಿಕೆ ಇಲಾಖೆಗೆ ಮಾಹಿತಿ ನೀಡಿ, ರಕ್ಷಣೆಗೆ ಮನವಿ ಮಾಡಿದ್ದರು. ಈ ಬಗ್ಗೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಭಾರತೀಯ ತಟ ರಕ್ಷಣಾ ಪಡೆಗೆ ಮಾಹಿತಿ ರವಾನಿಸಿದ್ದರು.
ಸಮುದ್ರದಲ್ಲಿ ಗಸ್ತಿನಲ್ಲಿದ್ದ ಕಸ್ತೂರಬಾ ಗಾಂಧಿ ಹಡಗು ಕೂಡಲೇ ಮಾಹಿತಿಗೆ ಸ್ಪಂದಿಸಿ, ಮೀನುಗಾರರು ಹಾಗೂ ಬೋಟ್ ಅನ್ನು ದಡಕ್ಕೆ ಕರೆತಂದಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am