ಬ್ರೇಕಿಂಗ್ ನ್ಯೂಸ್
11-09-20 02:18 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 11: ಭಾರೀ ಮಳೆ ಮತ್ತು ಗಾಳಿಯಿಂದಾಗಿ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೀನುಗಾರಿಕಾ ಬೋಟ್ ನಲ್ಲಿದ್ದ 24 ಮಂದಿಯನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಭಟ್ಕಳದಿಂದ ತೆರಳಿದ್ದ ಬೋಟ್ ಗಾಳಿಮಳೆಗೆ ಮುಳುಗುವ ಭೀತಿ ಎದುರಾಗಿತ್ತು. ಅಲ್ಲದೆ, ಬೋಟಿನಲ್ಲಿ ತಾಂತ್ರಿಕ ತೊಂದರೆಯೂ ಕಾಣಿಸಿಕೊಂಡಿದ್ದರಿಂದ ಮೀನುಗಾರರು ಮೀನುಗಾರಿಕಾ ಇಲಾಖೆಗೆ ರಕ್ಷಣೆ ಮಾಡುವಂತೆ ಮನವಿ ಮಾಡಿದ್ದರು. ಭಟ್ಕಳದಿಂದ 17 ನಾಟಿಕಲ್ ಮೈಲ್ ದೂರದಲ್ಲಿ ಘಟನೆ ನಡೆದಿತ್ತು.
ಭಾರತೀಯ ತಟರಕ್ಷಣಾ ಪಡೆಯ ಕಸ್ತೂರಬಾ ಗಾಂಧಿ ಹಡಗಿನ ಮೂಲಕ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಎಲ್ಲ 24 ಮಂದಿಯನ್ನು ಸುರಕ್ಷಿತವಾಗಿ ಸಮುದ್ರ ತೀರಕ್ಕೆ ಕರೆತಂದಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ಖಮರುಲ್ ಬಹಾರ್ ಹೆಸರಿನ ಬೋಟ್, ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಗಾಳಿ ಮಳೆ ಹೊಡೆತಕ್ಕೆ ಸಿಲುಕಿ ಅಪಾಯದಲ್ಲಿತ್ತು . ಬೋಟ್ ಮಾಲೀಕರು ಮೀನುಗಾರಿಕೆ ಇಲಾಖೆಗೆ ಮಾಹಿತಿ ನೀಡಿ, ರಕ್ಷಣೆಗೆ ಮನವಿ ಮಾಡಿದ್ದರು. ಈ ಬಗ್ಗೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಭಾರತೀಯ ತಟ ರಕ್ಷಣಾ ಪಡೆಗೆ ಮಾಹಿತಿ ರವಾನಿಸಿದ್ದರು.
ಸಮುದ್ರದಲ್ಲಿ ಗಸ್ತಿನಲ್ಲಿದ್ದ ಕಸ್ತೂರಬಾ ಗಾಂಧಿ ಹಡಗು ಕೂಡಲೇ ಮಾಹಿತಿಗೆ ಸ್ಪಂದಿಸಿ, ಮೀನುಗಾರರು ಹಾಗೂ ಬೋಟ್ ಅನ್ನು ದಡಕ್ಕೆ ಕರೆತಂದಿದೆ.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm