ಬ್ರೇಕಿಂಗ್ ನ್ಯೂಸ್
20-10-21 03:06 pm Udupi Correspondent ಕರಾವಳಿ
ಉಡುಪಿ, ಅ.20: ಬ್ರಹ್ಮಾವರ ಠಾಣೆ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಕಾಣೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಅನಾಸ್(16) ಮತ್ತು ಶ್ರೇಯಸ್ (18) ಮೃತ ವಿದ್ಯಾರ್ಥಿಗಳು. ಮಂಗಳವಾರ ಉಗ್ಗೇಲುಬೆಟ್ಟು ಮಡಿಸಾಲು ಎಂಬಲ್ಲಿ ಈಜಲೆಂದು ಸ್ವರ್ಣಾ ನದಿ ನೀರಿಗೆ ಇಳಿದಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ಇಬ್ಬರು ಯುವಕರು ನೀರುಪಾಲಾಗಿದ್ದರೆ, ಓರ್ವ ಬಾಲಕ ಪಾರಾಗಿ ಬಂದಿದ್ದ.


ಆದರೆ, ನದಿಯಿಂದ ಪಾರಾಗಿ ಬಂದರೂ ಭಯದಿಂದಾಗಿ ಉಳಿದಿಬ್ಬರು ನೀರುಪಾಲಾದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದರಿಂದ ಮಕ್ಕಳು ಮನೆಗೆ ಬಾರದೇ ಗಾಬರಿಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈಜಾಟಕ್ಕೆ ಹೋಗಿ ಮರಳಿದ್ದ ಬಾಲಕನ ವಿಚಾರಣೆ ವೇಳೆ ಜೊತೆಗೆ ತೆರಳಿದ್ದ ಇಬ್ಬರು ನೀರುಪಾಲಾದ ಬಗ್ಗೆ ತಿಳಿದುಬಂದಿದೆ. ಹೀಗಾಗಿ ನಿನ್ನೆ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.
ಈಜು ಪಟು ಈಶ್ವರ್ ಸೇರಿದಂತೆ ಅಗ್ನಿಶಾಮಕ ದಳವನ್ನು ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಮಕ್ಕಳು ಪತ್ತೆ ಆಗಿರಲಿಲ್ಲ. ಇಂದು ಬೆಳಗ್ಗೆ ಹರಿಯುವ ನದಿಯಲ್ಲಿ ಇಬ್ಬರ ಶವ ತೇಲುತ್ತಿರುವುದು ಕಂಡುಬಂದಿದ್ದು ದಡಕ್ಕೆ ತಂದಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two students, Shreyas and Anas, reportedly drowned in Madisalu rivulet when swimming on Tuesday October 19. Their bodies were recovered on Wednesday October 20 morning.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm