ಬ್ರೇಕಿಂಗ್ ನ್ಯೂಸ್
20-10-21 10:10 pm Mangaluru Correspondent ಕರಾವಳಿ
ಮಂಗಳೂರು, ಅ.20: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಬಳಿ ತಪಾಸಣೆ ನಿರತ ಪೊಲೀಸರ ಮೇಲೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಹಾಯಿಸಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಸಹ್ಯಾದ್ರಿ ಬಳಿಯ ನೇತ್ರಾವತಿ ನದಿಯ ಮರಳು ದಕ್ಕೆಯಿಂದ ಹೊರ ತೆರಳುತ್ತಿದ್ದ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚಿಸಿದಾಗ, ಟಿಪ್ಪರ್ ಲಾರಿ ಚಾಲಕ ಪೊಲೀಸರ ಮೇಲೆ ಹಾಯಿಸಲು ಯತ್ನಿಸಿ, ಬ್ಯಾರಿಕೇಡಿಗೆ ಡಿಕ್ಕಿಯಾಗಿ ಮುಂದಕ್ಕೆ ಸಾಗಿದ್ದಾನೆ.

ಆನಂತರ, ಅದರ ಬೆಂಗಾವಲಾಗಿ ಬಂದಿದ್ದ ಆಲ್ಟೋ ಕಾರನ್ನು ಕೂಡ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಕಾರಿನ ಚಾಲಕನ ಬಳಿ ಕುಳಿತಿದ್ದ ವ್ಯಕ್ತಿ ಪೊಲೀಸರನ್ನು ಉದ್ದೇಶಿಸಿ, ನಿಮಗೆಷ್ಟು ಧೈರ್ಯ. ನಮ್ಮ ಲಾರಿಯನ್ನು ನಿಲ್ಲಿಸುತ್ತೀರಾ.. ಲೋಫರ್ಸ್ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರು ನಿಲ್ಲಿಸದೇ ಪರಂಗಿಪೇಟೆ ಕಡೆಗೆ ಪರಾರಿಯಾಗಿದ್ದರು. ಕಾರಿನ ನಂಬರ್ ಕೆಎ 19 ಎಂಸಿ 2269 ಆಗಿರುತ್ತದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್ ಮತ್ತು ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ನನ್ನು ಸಂಜೆ ವೇಳೆಗೆ ಮಂಗಳೂರು ಪೊಲೀಸರು ಬಂಧಿಸಿದ್ದು ಪರಾರಿಯಾಗಿದ್ದ ಟಿಪ್ಪರ್ ಮತ್ತು ಕಾರನ್ನೂ ವಶಕ್ಕೆ ಪಡೆದಿದ್ದಾರೆ. ಇನ್ನಿತರ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಅಡ್ಯಾರ್ ನಲ್ಲಿ ಅಕ್ರಮ ಮರಳು ವಹಿವಾಟು ಎಗ್ಗಿಲ್ಲದೆ ನಡೆಯುತ್ತಿದ್ದು, ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಪೊಲೀಸರ ಮೇಲೆಯೇ ಹಾಯಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.
Mangalore Illegal sand mining Truck driver tries to run over cops who tried to stop, and two arrested for using foul language against the cops who tried to stop the truck.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm