ಬ್ರೇಕಿಂಗ್ ನ್ಯೂಸ್
20-10-21 10:10 pm Mangaluru Correspondent ಕರಾವಳಿ
ಮಂಗಳೂರು, ಅ.20: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಬಳಿ ತಪಾಸಣೆ ನಿರತ ಪೊಲೀಸರ ಮೇಲೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಹಾಯಿಸಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಸಹ್ಯಾದ್ರಿ ಬಳಿಯ ನೇತ್ರಾವತಿ ನದಿಯ ಮರಳು ದಕ್ಕೆಯಿಂದ ಹೊರ ತೆರಳುತ್ತಿದ್ದ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚಿಸಿದಾಗ, ಟಿಪ್ಪರ್ ಲಾರಿ ಚಾಲಕ ಪೊಲೀಸರ ಮೇಲೆ ಹಾಯಿಸಲು ಯತ್ನಿಸಿ, ಬ್ಯಾರಿಕೇಡಿಗೆ ಡಿಕ್ಕಿಯಾಗಿ ಮುಂದಕ್ಕೆ ಸಾಗಿದ್ದಾನೆ.

ಆನಂತರ, ಅದರ ಬೆಂಗಾವಲಾಗಿ ಬಂದಿದ್ದ ಆಲ್ಟೋ ಕಾರನ್ನು ಕೂಡ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಕಾರಿನ ಚಾಲಕನ ಬಳಿ ಕುಳಿತಿದ್ದ ವ್ಯಕ್ತಿ ಪೊಲೀಸರನ್ನು ಉದ್ದೇಶಿಸಿ, ನಿಮಗೆಷ್ಟು ಧೈರ್ಯ. ನಮ್ಮ ಲಾರಿಯನ್ನು ನಿಲ್ಲಿಸುತ್ತೀರಾ.. ಲೋಫರ್ಸ್ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರು ನಿಲ್ಲಿಸದೇ ಪರಂಗಿಪೇಟೆ ಕಡೆಗೆ ಪರಾರಿಯಾಗಿದ್ದರು. ಕಾರಿನ ನಂಬರ್ ಕೆಎ 19 ಎಂಸಿ 2269 ಆಗಿರುತ್ತದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್ ಮತ್ತು ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ನನ್ನು ಸಂಜೆ ವೇಳೆಗೆ ಮಂಗಳೂರು ಪೊಲೀಸರು ಬಂಧಿಸಿದ್ದು ಪರಾರಿಯಾಗಿದ್ದ ಟಿಪ್ಪರ್ ಮತ್ತು ಕಾರನ್ನೂ ವಶಕ್ಕೆ ಪಡೆದಿದ್ದಾರೆ. ಇನ್ನಿತರ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಅಡ್ಯಾರ್ ನಲ್ಲಿ ಅಕ್ರಮ ಮರಳು ವಹಿವಾಟು ಎಗ್ಗಿಲ್ಲದೆ ನಡೆಯುತ್ತಿದ್ದು, ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಪೊಲೀಸರ ಮೇಲೆಯೇ ಹಾಯಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.
Mangalore Illegal sand mining Truck driver tries to run over cops who tried to stop, and two arrested for using foul language against the cops who tried to stop the truck.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm