ಬ್ರೇಕಿಂಗ್ ನ್ಯೂಸ್
20-10-21 10:10 pm Mangaluru Correspondent ಕರಾವಳಿ
ಮಂಗಳೂರು, ಅ.20: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಬಳಿ ತಪಾಸಣೆ ನಿರತ ಪೊಲೀಸರ ಮೇಲೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಹಾಯಿಸಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಸಹ್ಯಾದ್ರಿ ಬಳಿಯ ನೇತ್ರಾವತಿ ನದಿಯ ಮರಳು ದಕ್ಕೆಯಿಂದ ಹೊರ ತೆರಳುತ್ತಿದ್ದ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚಿಸಿದಾಗ, ಟಿಪ್ಪರ್ ಲಾರಿ ಚಾಲಕ ಪೊಲೀಸರ ಮೇಲೆ ಹಾಯಿಸಲು ಯತ್ನಿಸಿ, ಬ್ಯಾರಿಕೇಡಿಗೆ ಡಿಕ್ಕಿಯಾಗಿ ಮುಂದಕ್ಕೆ ಸಾಗಿದ್ದಾನೆ.

ಆನಂತರ, ಅದರ ಬೆಂಗಾವಲಾಗಿ ಬಂದಿದ್ದ ಆಲ್ಟೋ ಕಾರನ್ನು ಕೂಡ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಕಾರಿನ ಚಾಲಕನ ಬಳಿ ಕುಳಿತಿದ್ದ ವ್ಯಕ್ತಿ ಪೊಲೀಸರನ್ನು ಉದ್ದೇಶಿಸಿ, ನಿಮಗೆಷ್ಟು ಧೈರ್ಯ. ನಮ್ಮ ಲಾರಿಯನ್ನು ನಿಲ್ಲಿಸುತ್ತೀರಾ.. ಲೋಫರ್ಸ್ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರು ನಿಲ್ಲಿಸದೇ ಪರಂಗಿಪೇಟೆ ಕಡೆಗೆ ಪರಾರಿಯಾಗಿದ್ದರು. ಕಾರಿನ ನಂಬರ್ ಕೆಎ 19 ಎಂಸಿ 2269 ಆಗಿರುತ್ತದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್ ಮತ್ತು ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ನನ್ನು ಸಂಜೆ ವೇಳೆಗೆ ಮಂಗಳೂರು ಪೊಲೀಸರು ಬಂಧಿಸಿದ್ದು ಪರಾರಿಯಾಗಿದ್ದ ಟಿಪ್ಪರ್ ಮತ್ತು ಕಾರನ್ನೂ ವಶಕ್ಕೆ ಪಡೆದಿದ್ದಾರೆ. ಇನ್ನಿತರ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಅಡ್ಯಾರ್ ನಲ್ಲಿ ಅಕ್ರಮ ಮರಳು ವಹಿವಾಟು ಎಗ್ಗಿಲ್ಲದೆ ನಡೆಯುತ್ತಿದ್ದು, ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಪೊಲೀಸರ ಮೇಲೆಯೇ ಹಾಯಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.
Mangalore Illegal sand mining Truck driver tries to run over cops who tried to stop, and two arrested for using foul language against the cops who tried to stop the truck.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm