ಬ್ರೇಕಿಂಗ್ ನ್ಯೂಸ್
22-10-21 05:19 pm Mangalore Reporter ಕರಾವಳಿ
ಮಂಗಳೂರು, ಅ.22 : ಮಂಗಳೂರಿನಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಹೆಸರಲ್ಲಿ ಜಾಹೀರಾತು ಸಂಸ್ಥೆ ಸ್ಥಾಪಿಸಿ, ದೇಶದ ಹಲವೆಡೆ ಕಚೇರಿಗಳನ್ನು ಆರಂಭಿಸಿ ಒಂದು ಕಾಲದಲ್ಲಿ ಮಿಂಚು ಹರಿಸಿದ್ದ ಸುಧೀರ್ ಘಾಟೆ(64) ಇಂದು ತಮ್ಮ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಲೆಕ್ಕ ಪರಿಶೋಧಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಸುಧೀರ್ ಘಾಟೆ, 1992 ರಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಜಾಹೀರಾತು ಸಂಸ್ಥೆಯನ್ನು ಆರಂಭಿಸಿದ್ದರು. ಆನಂತರ ಜಾಹೀರಾತು ಕ್ಷೇತ್ರದಲ್ಲಿ ದಿಗ್ಗಜನಾಗಿ ಮೆರೆದು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದರು. ಸಾವಿರಾರು ಮಂದಿಗೆ ಉದ್ಯೋಗದಾತರಾಗಿ ಸುಮಾರು 500ಕ್ಕಿಂತಲೂ ಹೆಚ್ಚು ಮಂದಿ ನುರಿತ ಕೆಲಸಗಾರರನ್ನು ತನ್ನ ಗರಡಿಯಲ್ಲಿ ಪಳಗಿಸಿದ್ದರು.
1995ರಲ್ಲಿ ಈಗಿನ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಯುವಮೋರ್ಚಾದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸುಧೀರ್ ಘಾಟೆ ಪ್ರಧಾನ ಕಾರ್ಯದರ್ಶಿ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಪಿ.ಆರ್.ಐ.ಎಸ್ ಅಧ್ಯಕ್ಷರಾಗಿಯೂ ತಮ್ಮ ಸೇವೆ ಸಲ್ಲಿಸಿದ್ದರು. ರಾಷ್ಟ್ರ ಮಟ್ಟದ ನಾಯಕರುಗಳಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿ, ಸುಷ್ಮಾ ಸ್ವರಾಜ್, ಆಡ್ವಾಣಿ, ಮುರಳಿ ಮನೋಹರ್ ಜೋಷಿ ಅವರಂತಹ ಹಿರಿಯರ ಒಡನಾಟದಲ್ಲಿ ಇದ್ದ ಸುಧೀರ್ ಘಾಟೆ, ಬಿಎಂಎಸ್ ಕಾರ್ಮಿಕ ಸಂಘಟನೆಯನ್ನು ದೇಶಾದ್ಯಂತ ಪಸರಿಸಿದ್ದ ಧೀಮಂತ ನಾಯಕ ದಿವಂಗತ ಪ್ರಭಾಕರ್ ಘಾಟೆ ಮತ್ತು ಶಾರದಾ ಘಾಟೆ ದಂಪತಿಯ ಪುತ್ರ.
ಒಂದು ಕಾಲದಲ್ಲಿ ಜಾಹೀರಾತು ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೆ ಕಾರಣವಾಗಿದ್ದ ಮ್ಯಾಗ್ನಮ್ ಸಂಸ್ಥೆ ಆನಂತರ ನಷ್ಟದ ಕಾರಣದಿಂದ ಮುಚ್ಚಿ ಹೋಗಿತ್ತು. ಆಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದ ಸುಧೀರ್ ಘಾಟೆಯವರು ತಮ್ಮ ಕೊಡಿಯಾಲಬೈಲಿನ ಮನೆಯಲ್ಲಿ ಉಳಿದುಕೊಂಡಿದ್ದರು. ಐದಾರು ವರ್ಷಗಳಿಂದ ಮನೆಯಲ್ಲಿದ್ದೇ ಚಿಕಿತ್ಸೆ ಪಡೆಯುತ್ತಿದ್ದರು. ಘಾಟೆಯವರು ಪತ್ನಿ, ಪುತ್ರ ಪ್ರಾಂಜಲ ಘಾಟೆ, ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Chairman and managing director at Magnum Intergrafiks, Sudhir Ghate, passed away here on Friday October 22. Sudhir Ghate was actively involved in Bharatiya Janata Party (BJP) activities.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm