ಬ್ರೇಕಿಂಗ್ ನ್ಯೂಸ್
22-10-21 05:19 pm Mangalore Reporter ಕರಾವಳಿ
ಮಂಗಳೂರು, ಅ.22 : ಮಂಗಳೂರಿನಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಹೆಸರಲ್ಲಿ ಜಾಹೀರಾತು ಸಂಸ್ಥೆ ಸ್ಥಾಪಿಸಿ, ದೇಶದ ಹಲವೆಡೆ ಕಚೇರಿಗಳನ್ನು ಆರಂಭಿಸಿ ಒಂದು ಕಾಲದಲ್ಲಿ ಮಿಂಚು ಹರಿಸಿದ್ದ ಸುಧೀರ್ ಘಾಟೆ(64) ಇಂದು ತಮ್ಮ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಲೆಕ್ಕ ಪರಿಶೋಧಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಸುಧೀರ್ ಘಾಟೆ, 1992 ರಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಜಾಹೀರಾತು ಸಂಸ್ಥೆಯನ್ನು ಆರಂಭಿಸಿದ್ದರು. ಆನಂತರ ಜಾಹೀರಾತು ಕ್ಷೇತ್ರದಲ್ಲಿ ದಿಗ್ಗಜನಾಗಿ ಮೆರೆದು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದರು. ಸಾವಿರಾರು ಮಂದಿಗೆ ಉದ್ಯೋಗದಾತರಾಗಿ ಸುಮಾರು 500ಕ್ಕಿಂತಲೂ ಹೆಚ್ಚು ಮಂದಿ ನುರಿತ ಕೆಲಸಗಾರರನ್ನು ತನ್ನ ಗರಡಿಯಲ್ಲಿ ಪಳಗಿಸಿದ್ದರು.
1995ರಲ್ಲಿ ಈಗಿನ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಯುವಮೋರ್ಚಾದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸುಧೀರ್ ಘಾಟೆ ಪ್ರಧಾನ ಕಾರ್ಯದರ್ಶಿ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಪಿ.ಆರ್.ಐ.ಎಸ್ ಅಧ್ಯಕ್ಷರಾಗಿಯೂ ತಮ್ಮ ಸೇವೆ ಸಲ್ಲಿಸಿದ್ದರು. ರಾಷ್ಟ್ರ ಮಟ್ಟದ ನಾಯಕರುಗಳಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿ, ಸುಷ್ಮಾ ಸ್ವರಾಜ್, ಆಡ್ವಾಣಿ, ಮುರಳಿ ಮನೋಹರ್ ಜೋಷಿ ಅವರಂತಹ ಹಿರಿಯರ ಒಡನಾಟದಲ್ಲಿ ಇದ್ದ ಸುಧೀರ್ ಘಾಟೆ, ಬಿಎಂಎಸ್ ಕಾರ್ಮಿಕ ಸಂಘಟನೆಯನ್ನು ದೇಶಾದ್ಯಂತ ಪಸರಿಸಿದ್ದ ಧೀಮಂತ ನಾಯಕ ದಿವಂಗತ ಪ್ರಭಾಕರ್ ಘಾಟೆ ಮತ್ತು ಶಾರದಾ ಘಾಟೆ ದಂಪತಿಯ ಪುತ್ರ.
ಒಂದು ಕಾಲದಲ್ಲಿ ಜಾಹೀರಾತು ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೆ ಕಾರಣವಾಗಿದ್ದ ಮ್ಯಾಗ್ನಮ್ ಸಂಸ್ಥೆ ಆನಂತರ ನಷ್ಟದ ಕಾರಣದಿಂದ ಮುಚ್ಚಿ ಹೋಗಿತ್ತು. ಆಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದ ಸುಧೀರ್ ಘಾಟೆಯವರು ತಮ್ಮ ಕೊಡಿಯಾಲಬೈಲಿನ ಮನೆಯಲ್ಲಿ ಉಳಿದುಕೊಂಡಿದ್ದರು. ಐದಾರು ವರ್ಷಗಳಿಂದ ಮನೆಯಲ್ಲಿದ್ದೇ ಚಿಕಿತ್ಸೆ ಪಡೆಯುತ್ತಿದ್ದರು. ಘಾಟೆಯವರು ಪತ್ನಿ, ಪುತ್ರ ಪ್ರಾಂಜಲ ಘಾಟೆ, ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Chairman and managing director at Magnum Intergrafiks, Sudhir Ghate, passed away here on Friday October 22. Sudhir Ghate was actively involved in Bharatiya Janata Party (BJP) activities.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm