ಬ್ರೇಕಿಂಗ್ ನ್ಯೂಸ್
22-10-21 05:19 pm Mangalore Reporter ಕರಾವಳಿ
ಮಂಗಳೂರು, ಅ.22 : ಮಂಗಳೂರಿನಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಹೆಸರಲ್ಲಿ ಜಾಹೀರಾತು ಸಂಸ್ಥೆ ಸ್ಥಾಪಿಸಿ, ದೇಶದ ಹಲವೆಡೆ ಕಚೇರಿಗಳನ್ನು ಆರಂಭಿಸಿ ಒಂದು ಕಾಲದಲ್ಲಿ ಮಿಂಚು ಹರಿಸಿದ್ದ ಸುಧೀರ್ ಘಾಟೆ(64) ಇಂದು ತಮ್ಮ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಲೆಕ್ಕ ಪರಿಶೋಧಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಸುಧೀರ್ ಘಾಟೆ, 1992 ರಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಜಾಹೀರಾತು ಸಂಸ್ಥೆಯನ್ನು ಆರಂಭಿಸಿದ್ದರು. ಆನಂತರ ಜಾಹೀರಾತು ಕ್ಷೇತ್ರದಲ್ಲಿ ದಿಗ್ಗಜನಾಗಿ ಮೆರೆದು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದರು. ಸಾವಿರಾರು ಮಂದಿಗೆ ಉದ್ಯೋಗದಾತರಾಗಿ ಸುಮಾರು 500ಕ್ಕಿಂತಲೂ ಹೆಚ್ಚು ಮಂದಿ ನುರಿತ ಕೆಲಸಗಾರರನ್ನು ತನ್ನ ಗರಡಿಯಲ್ಲಿ ಪಳಗಿಸಿದ್ದರು.
1995ರಲ್ಲಿ ಈಗಿನ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಯುವಮೋರ್ಚಾದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸುಧೀರ್ ಘಾಟೆ ಪ್ರಧಾನ ಕಾರ್ಯದರ್ಶಿ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಪಿ.ಆರ್.ಐ.ಎಸ್ ಅಧ್ಯಕ್ಷರಾಗಿಯೂ ತಮ್ಮ ಸೇವೆ ಸಲ್ಲಿಸಿದ್ದರು. ರಾಷ್ಟ್ರ ಮಟ್ಟದ ನಾಯಕರುಗಳಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿ, ಸುಷ್ಮಾ ಸ್ವರಾಜ್, ಆಡ್ವಾಣಿ, ಮುರಳಿ ಮನೋಹರ್ ಜೋಷಿ ಅವರಂತಹ ಹಿರಿಯರ ಒಡನಾಟದಲ್ಲಿ ಇದ್ದ ಸುಧೀರ್ ಘಾಟೆ, ಬಿಎಂಎಸ್ ಕಾರ್ಮಿಕ ಸಂಘಟನೆಯನ್ನು ದೇಶಾದ್ಯಂತ ಪಸರಿಸಿದ್ದ ಧೀಮಂತ ನಾಯಕ ದಿವಂಗತ ಪ್ರಭಾಕರ್ ಘಾಟೆ ಮತ್ತು ಶಾರದಾ ಘಾಟೆ ದಂಪತಿಯ ಪುತ್ರ.
ಒಂದು ಕಾಲದಲ್ಲಿ ಜಾಹೀರಾತು ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೆ ಕಾರಣವಾಗಿದ್ದ ಮ್ಯಾಗ್ನಮ್ ಸಂಸ್ಥೆ ಆನಂತರ ನಷ್ಟದ ಕಾರಣದಿಂದ ಮುಚ್ಚಿ ಹೋಗಿತ್ತು. ಆಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದ ಸುಧೀರ್ ಘಾಟೆಯವರು ತಮ್ಮ ಕೊಡಿಯಾಲಬೈಲಿನ ಮನೆಯಲ್ಲಿ ಉಳಿದುಕೊಂಡಿದ್ದರು. ಐದಾರು ವರ್ಷಗಳಿಂದ ಮನೆಯಲ್ಲಿದ್ದೇ ಚಿಕಿತ್ಸೆ ಪಡೆಯುತ್ತಿದ್ದರು. ಘಾಟೆಯವರು ಪತ್ನಿ, ಪುತ್ರ ಪ್ರಾಂಜಲ ಘಾಟೆ, ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Chairman and managing director at Magnum Intergrafiks, Sudhir Ghate, passed away here on Friday October 22. Sudhir Ghate was actively involved in Bharatiya Janata Party (BJP) activities.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm