ಬ್ರೇಕಿಂಗ್ ನ್ಯೂಸ್
23-10-21 01:45 pm Mangalore Reporter ಕರಾವಳಿ
ಮಂಗಳೂರು, ಅ.23 : ನಿಧಿ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಕೋಣಾಜೆ ಬಳಿಯ ಇರಾದಲ್ಲಿ ನಡೆದಿದ್ದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಪ್ಪರ ಕಂಬಳದ ನಾಗಬನದ ಪಕ್ಕದ ಹುತ್ತವೊಂದರಲ್ಲಿ ಕಳ್ಳರು ನಿಧಿಯ ಆಸೆಯಿಂದ ಭೂಮಿಯನ್ನು ಸುಮಾರು ಹತ್ತು ಅಡಿ ಆಗೆದಿದ್ದಾರೆ.

ದೇವಸ್ಥಾನಕ್ಕೆ ಸಂಬಂಧಪಟ್ಟ ನಾಗಬನಕ್ಕೆ ನಾಗನಕಟ್ಟೆಯನ್ನು ಕಟ್ಟಲಾಗಿದೆ. ಕಳ್ಳರು ನಾಗನಕಟ್ಟೆಗೆ ಯಾವುದೇ ಹಾನಿಯನ್ನುಂಟು ಮಾಡಿಲ್ಲ. ಪ್ರಚಲಿತದಲ್ಲಿರುವಂತೆ ಈ ಭಾಗದಲ್ಲಿ ನಿಧಿ ಇದೆ ಎಂಬುದನ್ನು ಹಿಂದಿನ ಕಾಲದ ಜನರು ಆಡಿಕೊಳ್ಳುವುದನ್ನು ಕೇಳಿ ಅದು ಜನರ ಬಾಯಿಂದ ಕಿವಿಗೆ ಹರಡಿ ದುರಾಸೆಯಿಂದ ಕಳ್ಳರು ನಿಧಿ ಶೋಧ ನಡೆಸಿದ್ದಾರೆ ಎಂದು ಜನರಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ದೇವಸ್ಥಾನ ಸಮಿತಿ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.

ಇವೆಲ್ಲದರ ಜೊತೆಯಲ್ಲಿ ಇರಾ ಸಾಮರಸ್ಯದ ಗ್ರಾಮವಾಗಿದ್ದು ಈ ಘಟನೆಯನ್ನು ಯಾವುದೇ ಕಾರಣಕ್ಕೂ ಕೋಮು ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಮುಂದುವರಿಸಬೇಕೆಂದು ಕ್ಷೇತ್ರದ ಸಮಿತಿ ಸದಸ್ಯರೊಬ್ಬರು ವಿನಂತಿಸಿಕೊಂಡಿದ್ದಾರೆ.
ನಾಗಬನದ ಆಸುಪಾಸಿನಲ್ಲಿ ಕಂಬಳ ಗದ್ದೆ ಇದ್ದು ಧಾರ್ಮಿಕ ನೆಲೆಗಟ್ಟಿನಲ್ಲಿ ಕಾರಣಿಕ ಬೀರುತ್ತಿರುವುದರಿಂದ ಅಲ್ಲೆಲ್ಲ ನಿಧಿ ಇರುತ್ತದೆ, ನಾಗ ಕಾವಲು ಕಾಯುತ್ತಾನೆ ಎಂಬ ಪ್ರತೀತಿ ಇದ್ದು ನಿಧಿ ಆಶೆಯಿಂದ ಕಳ್ಳರು ಭೂಮಿ ಅಗೆಯುವ ಪ್ರಕರಣ ಆಗಾಗ್ಗೆ ಕೇಳಿಬರುತ್ತಿದೆ. ನಿಧಿ ಸಿಗದೆ ನಿರಾಶರಾದರೂ ಭೂಮಿ ಅಗೆಯುವುದು ನಿಂತಿಲ್ಲ.
Mangalore Treasure hunt at Bantwal Ira Nagabana temple premises found.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm