ಬ್ರೇಕಿಂಗ್ ನ್ಯೂಸ್
23-10-21 01:45 pm Mangalore Reporter ಕರಾವಳಿ
ಮಂಗಳೂರು, ಅ.23 : ನಿಧಿ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಕೋಣಾಜೆ ಬಳಿಯ ಇರಾದಲ್ಲಿ ನಡೆದಿದ್ದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಪ್ಪರ ಕಂಬಳದ ನಾಗಬನದ ಪಕ್ಕದ ಹುತ್ತವೊಂದರಲ್ಲಿ ಕಳ್ಳರು ನಿಧಿಯ ಆಸೆಯಿಂದ ಭೂಮಿಯನ್ನು ಸುಮಾರು ಹತ್ತು ಅಡಿ ಆಗೆದಿದ್ದಾರೆ.

ದೇವಸ್ಥಾನಕ್ಕೆ ಸಂಬಂಧಪಟ್ಟ ನಾಗಬನಕ್ಕೆ ನಾಗನಕಟ್ಟೆಯನ್ನು ಕಟ್ಟಲಾಗಿದೆ. ಕಳ್ಳರು ನಾಗನಕಟ್ಟೆಗೆ ಯಾವುದೇ ಹಾನಿಯನ್ನುಂಟು ಮಾಡಿಲ್ಲ. ಪ್ರಚಲಿತದಲ್ಲಿರುವಂತೆ ಈ ಭಾಗದಲ್ಲಿ ನಿಧಿ ಇದೆ ಎಂಬುದನ್ನು ಹಿಂದಿನ ಕಾಲದ ಜನರು ಆಡಿಕೊಳ್ಳುವುದನ್ನು ಕೇಳಿ ಅದು ಜನರ ಬಾಯಿಂದ ಕಿವಿಗೆ ಹರಡಿ ದುರಾಸೆಯಿಂದ ಕಳ್ಳರು ನಿಧಿ ಶೋಧ ನಡೆಸಿದ್ದಾರೆ ಎಂದು ಜನರಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ದೇವಸ್ಥಾನ ಸಮಿತಿ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.

ಇವೆಲ್ಲದರ ಜೊತೆಯಲ್ಲಿ ಇರಾ ಸಾಮರಸ್ಯದ ಗ್ರಾಮವಾಗಿದ್ದು ಈ ಘಟನೆಯನ್ನು ಯಾವುದೇ ಕಾರಣಕ್ಕೂ ಕೋಮು ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಮುಂದುವರಿಸಬೇಕೆಂದು ಕ್ಷೇತ್ರದ ಸಮಿತಿ ಸದಸ್ಯರೊಬ್ಬರು ವಿನಂತಿಸಿಕೊಂಡಿದ್ದಾರೆ.
ನಾಗಬನದ ಆಸುಪಾಸಿನಲ್ಲಿ ಕಂಬಳ ಗದ್ದೆ ಇದ್ದು ಧಾರ್ಮಿಕ ನೆಲೆಗಟ್ಟಿನಲ್ಲಿ ಕಾರಣಿಕ ಬೀರುತ್ತಿರುವುದರಿಂದ ಅಲ್ಲೆಲ್ಲ ನಿಧಿ ಇರುತ್ತದೆ, ನಾಗ ಕಾವಲು ಕಾಯುತ್ತಾನೆ ಎಂಬ ಪ್ರತೀತಿ ಇದ್ದು ನಿಧಿ ಆಶೆಯಿಂದ ಕಳ್ಳರು ಭೂಮಿ ಅಗೆಯುವ ಪ್ರಕರಣ ಆಗಾಗ್ಗೆ ಕೇಳಿಬರುತ್ತಿದೆ. ನಿಧಿ ಸಿಗದೆ ನಿರಾಶರಾದರೂ ಭೂಮಿ ಅಗೆಯುವುದು ನಿಂತಿಲ್ಲ.
Mangalore Treasure hunt at Bantwal Ira Nagabana temple premises found.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm