ಬ್ರೇಕಿಂಗ್ ನ್ಯೂಸ್
23-10-21 01:45 pm Mangalore Reporter ಕರಾವಳಿ
ಮಂಗಳೂರು, ಅ.23 : ನಿಧಿ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಕೋಣಾಜೆ ಬಳಿಯ ಇರಾದಲ್ಲಿ ನಡೆದಿದ್ದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಪ್ಪರ ಕಂಬಳದ ನಾಗಬನದ ಪಕ್ಕದ ಹುತ್ತವೊಂದರಲ್ಲಿ ಕಳ್ಳರು ನಿಧಿಯ ಆಸೆಯಿಂದ ಭೂಮಿಯನ್ನು ಸುಮಾರು ಹತ್ತು ಅಡಿ ಆಗೆದಿದ್ದಾರೆ.
ದೇವಸ್ಥಾನಕ್ಕೆ ಸಂಬಂಧಪಟ್ಟ ನಾಗಬನಕ್ಕೆ ನಾಗನಕಟ್ಟೆಯನ್ನು ಕಟ್ಟಲಾಗಿದೆ. ಕಳ್ಳರು ನಾಗನಕಟ್ಟೆಗೆ ಯಾವುದೇ ಹಾನಿಯನ್ನುಂಟು ಮಾಡಿಲ್ಲ. ಪ್ರಚಲಿತದಲ್ಲಿರುವಂತೆ ಈ ಭಾಗದಲ್ಲಿ ನಿಧಿ ಇದೆ ಎಂಬುದನ್ನು ಹಿಂದಿನ ಕಾಲದ ಜನರು ಆಡಿಕೊಳ್ಳುವುದನ್ನು ಕೇಳಿ ಅದು ಜನರ ಬಾಯಿಂದ ಕಿವಿಗೆ ಹರಡಿ ದುರಾಸೆಯಿಂದ ಕಳ್ಳರು ನಿಧಿ ಶೋಧ ನಡೆಸಿದ್ದಾರೆ ಎಂದು ಜನರಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ದೇವಸ್ಥಾನ ಸಮಿತಿ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.
ಇವೆಲ್ಲದರ ಜೊತೆಯಲ್ಲಿ ಇರಾ ಸಾಮರಸ್ಯದ ಗ್ರಾಮವಾಗಿದ್ದು ಈ ಘಟನೆಯನ್ನು ಯಾವುದೇ ಕಾರಣಕ್ಕೂ ಕೋಮು ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಮುಂದುವರಿಸಬೇಕೆಂದು ಕ್ಷೇತ್ರದ ಸಮಿತಿ ಸದಸ್ಯರೊಬ್ಬರು ವಿನಂತಿಸಿಕೊಂಡಿದ್ದಾರೆ.
ನಾಗಬನದ ಆಸುಪಾಸಿನಲ್ಲಿ ಕಂಬಳ ಗದ್ದೆ ಇದ್ದು ಧಾರ್ಮಿಕ ನೆಲೆಗಟ್ಟಿನಲ್ಲಿ ಕಾರಣಿಕ ಬೀರುತ್ತಿರುವುದರಿಂದ ಅಲ್ಲೆಲ್ಲ ನಿಧಿ ಇರುತ್ತದೆ, ನಾಗ ಕಾವಲು ಕಾಯುತ್ತಾನೆ ಎಂಬ ಪ್ರತೀತಿ ಇದ್ದು ನಿಧಿ ಆಶೆಯಿಂದ ಕಳ್ಳರು ಭೂಮಿ ಅಗೆಯುವ ಪ್ರಕರಣ ಆಗಾಗ್ಗೆ ಕೇಳಿಬರುತ್ತಿದೆ. ನಿಧಿ ಸಿಗದೆ ನಿರಾಶರಾದರೂ ಭೂಮಿ ಅಗೆಯುವುದು ನಿಂತಿಲ್ಲ.
Mangalore Treasure hunt at Bantwal Ira Nagabana temple premises found.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm