ಬ್ರೇಕಿಂಗ್ ನ್ಯೂಸ್
30-10-21 09:21 pm Mangaluru Correspondent ಕರಾವಳಿ
ಮಂಗಳೂರು, ಅ.30: ಸುರತ್ಕಲ್ ಜಂಕ್ಷನ್ ಗೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರನ್ನಿಡಲು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಮತ್ತು ಆ ಭಾಗದ ಬಿಜೆಪಿ ಕಾರ್ಪೊರೇಟರುಗಳು ಮಹಾನಗರ ಪಾಲಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಪ್ರಸ್ತಾವನೆಯ ಬಗ್ಗೆ ಚರ್ಚಿಸಿ ನಿರ್ಧಾರಕ್ಕೆ ಬರಲು ಮೇಯರ್ ಪ್ರೇಮಾನಂದ ಶೆಟ್ಟಿ ಸ್ಥಾಯಿ ಸಮಿತಿಗೆ ರವಾನಿಸಿದ್ದಾರೆ.
ವೀರ ಸಾವರ್ಕರ್ ಹೆಸರಿನ ಪ್ರಸ್ತಾವಕ್ಕೆ ಕಾಂಗ್ರೆಸ್ ಮತ್ತು ಎಸ್ ಡಿಪಿಐ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದು, ಸ್ಥಾಯಿ ಸಮಿತಿ ಸಭೆಯ ಚರ್ಚೆಯಲ್ಲಿ ಭಾಗವಹಿಸಲು ತಮಗೂ ಅವಕಾಶ ನೀಡಬೇಕೆಂದು ಅಹವಾಲು ಸಲ್ಲಿಸಿದ್ದಾರೆ. ಸುರತ್ಕಲ್ ಭಾಗದ ಎಸ್ ಡಿಪಿಐ ಸದಸ್ಯರಾದ ಮುನೀರ್ ಮತ್ತು ಅಬುಬಕ್ಕರ್ ಈ ಬಗ್ಗೆ ಮೇಯರ್ ಅವರಿಗೆ ಅಹವಾಲು ನೀಡಿದ್ದಾರೆ. ಅಲ್ಲದೆ, ಪಾಲಿಕೆಯ ಪ್ರತಿಪಕ್ಷ ನಾಯಕ ವಿನಯರಾಜ್ ಕೂಡ ಬಿಜೆಪಿ ಪ್ರಸ್ತಾವಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಸ್ಥಾಯಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಅವಕಾಶ ಕೇಳಿದ್ದಾರೆ.

ಇತ್ತೀಚೆಗೆ ವೀರ ಸಾವರ್ಕರ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಸ್ವಾತಂತ್ರ್ಯ ರಥದಲ್ಲಿ ಅಳವಡಿಸಿ, ಕಾರ್ಯಕ್ರಮ ಏರ್ಪಡಿಸಿದ್ದಾಗ ಎಸ್ ಡಿಪಿಐ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಗಲಾಟೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿತ್ತು. ಸ್ವಾತಂತ್ರ್ಯ ದಿನದಂದೇ ಕಬಕದಲ್ಲಿ ನಡೆದ ಕಾರ್ಯಕ್ರಮಕ್ಕೆ ಧಿಕ್ಕಾರ ಕೂಗಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಐದಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.
ಆನಂತರ, ಮಂಗಳೂರಿನ ಬಿಜೆಪಿ ಶಾಸಕ ಭರತ್ ಶೆಟ್ಟಿ ಸಾವರ್ಕರ್ ಪರವಾಗಿ ಬ್ಯಾಟಿಂಗ್ ಮಾಡಿದ್ದರು. ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಪರವಾಗಿ ಘೋಷಣೆ ಕೂಗುತ್ತಾ ಬೆಂಬಲ ಸಾರಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿಯ ರಾಜ್ಯ ನಾಯಕರು ಸಾವರ್ಕರ್ ವಿಚಾರದಲ್ಲಿ ಪರ- ವಿರೋಧ ಹೇಳಿಕೆ ನೀಡಿ ವಿವಾದಕ್ಕೆ ತುಪ್ಪ ಸುರಿದಿದ್ದರು. ಇದೀಗ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ತಾನು ಪ್ರತಿನಿಧಿಸುವ ಸುರತ್ಕಲ್ ಪೇಟೆಯ ಜಂಕ್ಷನ್ನಿಗೆ ಸಾವರ್ಕರ್ ಜಂಕ್ಷನ್ ಹೆಸರಿಡಲು ಮುಂದಾಗಿದ್ದಾರೆ. ಆಮೂಲಕ ಸಾವರ್ಕರ್ ಪರವಾಗಿ ಹೊಸ ದಾಳವನ್ನು ಉರುಳಿಸಿದ್ದಾರೆ.

ನಿಜಕ್ಕಾದರೆ, ಈ ವಿಚಾರವನ್ನು ಮಹಾನಗರ ಪಾಲಿಕೆಯ ಕೌನ್ಸಿಲ್ ಮೀಟಿಂಗ್ ನಲ್ಲಿ ಮುಂದಿಟ್ಟು ಚರ್ಚೆ ನಡೆಸಬೇಕಾಗಿತ್ತು. ಆದರೆ, ಬಿಜೆಪಿ ನಾಯಕರು ಸ್ಥಾಯಿ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರಕ್ಕೆ ಬರಲು ಮುಂದಾಗಿದ್ದಾರೆ. ಕಳೆದ ಬಾರಿ ನಗರದ ಲೇಡಿಹಿಲ್ ಸರ್ಕಲ್ ಗೆ ನಾರಾಯಣ ಗುರು ಸರ್ಕಲ್ ಎಂದು ನಾಮಕರಣ ಮಾಡುವ ವಿಚಾರದಲ್ಲಿ ಪರ- ವಿರೋಧ ಚರ್ಚೆ ನಡೆದಿತ್ತು. ಆನಂತರ, ಪಾಲಿಕೆಯಲ್ಲಿ ಈ ಬಗ್ಗೆ ನಿರ್ಧರಿಸಿ ರಾಜ್ಯ ಸರಕಾರಕ್ಕೆ ರವಾನೆಯಾಗಿತ್ತು. ಅದಿನ್ನೂ ಜಾರಿಗೆ ಬಂದಿಲ್ಲ. ಈ ನಡುವೆ, ಸುರತ್ಕಲ್ ಪೇಟೆಗೆ ಸಾವರ್ಕರ್ ಹೆಸರಿಡುವ ವಿಚಾರ ಮುನ್ನೆಲೆಗೆ ಬಂದಿದ್ದು ಮತ್ತೊಂದು ವಿವಾದದ ಬಿರುಗಾಳಿ ಎಬ್ಬಿಸಲಿದೆ.
Mangalore MLA Bharath Shetty and local corporators have planned to name Surathkal Junction as Savarkar Circle for which a memorandum has been submitted to the Mayor of Mangalore City Corporation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm