ಬ್ರೇಕಿಂಗ್ ನ್ಯೂಸ್
31-10-21 01:43 pm Mangaluru Correspondent ಕರಾವಳಿ
ಉಳ್ಳಾಲ, ಅ.31 : ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕುಂಪಲ, ಪಿಲಾರು ಪಳ್ಳ ಪ್ರದೇಶದಲ್ಲಿ ಚಿರತೆ ಸಂಚರಿಸುವುದನ್ನ ವ್ಯಕ್ತಿಯೋರ್ವರು ಪ್ರತ್ಯಕ್ಷ ಕಂಡಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಕುಂಪಲ ಬಾಲಕೃಷ್ಣ ಮಂದಿರ, ಸರಳಾಯ ಕಾಲನಿಯಲ್ಲಿ ಎರಡು ದಿವಸಗಳ ಹಿಂದೆಯೇ ಚಿರತೆ ಸಂಚರಿಸುತ್ತಿದ್ದ ಬಗ್ಗೆ ಸುದ್ದಿಯಾಗಿದ್ದು ಸ್ಥಳೀಯರಲ್ಲಿ ಚಿರತೆಯ ಗುಮ್ಮ ಮನೆ ಮಾಡಿತ್ತು. ಕುಂಪಲ ಪ್ರದೇಶದಲ್ಲಿ ಬೀದಿ ನಾಯಿಗಳ ಸಂಖ್ಯೆ ಜಾಸ್ತಿಯಾಗಿದ್ದು ನಾಯಿಗಳ ಮಾಂಸ ಅರಸಿ ಚಿರತೆ ಬಂದಿದೆಯೋ ಎಂದು ಕುಂಪಲದ ಜನರು ಹೇಳುತ್ತಿದ್ದರು.
ನಿನ್ನೆ ರಾತ್ರಿ ಕುಂಪಲ ಸಮೀಪದ ಪಿಲಾರು ಪಳ್ಳ ಎಂಬ ಗುಡ್ಡ ಪ್ರದೇಶದಲ್ಲಿ ವ್ಯಕ್ತಿಯೋರ್ವರು ಚಿರತೆಯನ್ನ ಕಣ್ಣಾರೆ ಕಂಡಿದ್ದು ಸ್ಥಳೀಯರಲ್ಲಿ ಆತಂಕ ಇನ್ನಷ್ಟು ಹೆಚ್ಚುವಂತೆ ಮಾಡಿದೆ. ಪಿಲಾರು ಪಳ್ಳ ನಿವಾಸಿ ಶಿವರಾಜ್ ಪೊಣ್ಣು ಸ್ವಾಮಿ ಎಂಬವರು ನಿನ್ನೆ ರಾತ್ರಿ 9.30 ಗಂಟೆ ಸುಮಾರಿಗೆ ತನ್ನ ಮನೆಯಿಂದ ಮಗಳ ಮನೆಗೆ ತೆರಳುತ್ತಿದ್ದ ವೇಳೆ ಮನೆಯ ಬಳಿಯೇ ಚಿರತೆಯೊಂದು ರಸ್ತೆ ದಾಟಿ ಪೊದೆಯೊಳಗೆ ನುಗ್ಗಿದನ್ನ ಕಣ್ಣಾರೆ ಕಂಡಿದ್ದಾರೆ. ಮೊದಲಿಗೆ ಶಿವರಾಜ್ ಅವರು ಬೆಕ್ಕೆಂದು ಗ್ರಹಿಸಿದರೂ ಅದರ ಉದ್ದನೆಯ ಬಾಲ ಮತ್ತು ಬಣ್ಣವನ್ನ ಕಂಡು ಸಣ್ಣ ಗಾತ್ರದ ಚಿರತೆಯೆಂದು ಮನದಟ್ಟು ಮಾಡಿದ್ದಾರೆ. ನಿನ್ನೆ ರಾತ್ರಿ ಮಳೆ ಸುರಿದುದರಿಂದ ಚಿರತೆಯ ಹೆಜ್ಜೆ ಗುರುತು ಮಾಸಿದೆ.






ಕುಂಪಲದಲ್ಲಿ ಚಿರತೆ ಇರುವ ಗುಮ್ಮಕ್ಕೆ ಇದೀಗ ಪ್ರತ್ಯಕ್ಷ ಸಾಕ್ಷಿ ದೊರೆತ್ತಿದ್ದು ಸ್ಥಳೀಯರಲ್ಲಿ ಇನ್ನಷ್ಟು ಆತಂಕ ಹೆಚ್ಚಿದೆ. ಪಿಲಾರು ಪಳ್ಳದ ಸರಳಾಯ ಕಾಲನಿ ಹತ್ತಿರ ವಿಶಾಲ ಗುಡ್ಡ ಪ್ರದೇಶವಿದ್ದು ಕಾಡು ಇದೆ. ಇಲ್ಲಿ ಕಾಡು ಹಂದಿ, ಮುಳ್ಳು ಹಂದಿ, ನವಿಲು, ಉಡ ಮುಂತಾದ ವನ್ಯ ಜೀವಿಗಳು ಸಂಚರಿಸುತ್ತಿರುತ್ತವೆ ಎಂದು ಸ್ಥಳೀಯ ಸಮಾಜ ಸೇವಕರಾದ ಉದಯಗಟ್ಟಿ ಪಿಲಾರು ತಿಳಿಸಿದ್ದಾರೆ.
ಅರಣ್ಯ ಇಲಾಖೆಯವರಿಗೆ ಕುಂಪಲದಲ್ಲಿ ಚಿರತೆ ಇರುವಿಕೆಯ ಬಗ್ಗೆ ಯಾವುದೇ ದೂರು ಬಂದಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.
Mangalore Kumpala Resident spots Cheetah near Pillar localities in fear. Two days ago they were rumours that Cheetah was seen by some people but again last night Pillar resident who saw the cheetah has put localities in great fear.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm