ಬ್ರೇಕಿಂಗ್ ನ್ಯೂಸ್
02-11-21 07:21 pm Headline Karnataka News Network ಕರಾವಳಿ
ನವದೆಹಲಿ, ನ.2: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಹೊಸ ಪಕ್ಷಕ್ಕೆ ಪಂಜಾಬ್ ಲೋಕ್ ಕಾಂಗ್ರೆಸ್ ಎಂದು ಹೆಸರಿಟ್ಟಿದ್ದು, ನವಜೋತ್ ಸಿಂಗ್ ಸಿಧು ನೇತೃತ್ವದ ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಪತ್ರವನ್ನೂ ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿಗೆ ಸಲ್ಲಿಸಿದ್ದಾರೆ.
ನಾನು ಸೋನಿಯಾ ಗಾಂಧಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದು, ಅದರಲ್ಲಿ ರಾಜಿನಾಮೆಗೆ ಕಾರಣವನ್ನೂ ಉಲ್ಲೇಖಿಸಿದ್ದೇನೆ. ಪಂಜಾಬ್ ಲೋಕ್ ಕಾಂಗ್ರೆಸ್ ಅನ್ನುವುದು ಹೊಸ ಪಕ್ಷವಾಗಿದ್ದು, ಅದರ ಚಿಹ್ನೆ ಇನ್ನಷ್ಟೇ ಅಂತಿಮ ಆಗಬೇಕಿದೆ. ಚುನಾವಣಾ ಆಯೋಗದಲ್ಲಿ ನೋಂದಣಿ ಇನ್ನೂ ಅಂತಿಮಗೊಂಡಿಲ್ಲ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ತಿಂಗಳ ಹಿಂದಷ್ಟೇ ಪಂಜಾಬ್ ಮುಖ್ಯಮಂತ್ರಿ ಪದವಿಯಿಂದ ಅಮರಿಂದರ್ ಸಿಂಗ್ ರಾಜಿನಾಮೆ ನೀಡಿ ಹೊರನಡೆದಿದ್ದರು. ಪಂಜಾಬ್ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಜೊತೆಯಲ್ಲಿ ಜಟಾಪಟಿ ನಡೆದ ಬಳಿಕ ಈ ಬೆಳವಣಿಗೆ ನಡೆದಿತ್ತು. ಆನಂತರ ಸಿಖ್ ಸಮುದಾಯದ ಹಿಂದುಳಿದ ವರ್ಗದ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಸಿಎಂ ಪದವಿಗೆ ಏರಿಸಲಾಗಿತ್ತು.
ಸಿಎಂ ಪದವಿಯಿಂದ ಕೆಳಗಿಳಿದ ಬಳಿಕ ಹೊಸ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದರು. ಅಲ್ಲದೆ, ಬಿಜೆಪಿ ನಾಯಕರು ಕೂಡ ಅವರನ್ನು ದೆಹಲಿಗೆ ಕರೆದು ಮಾತನಾಡಿದ್ದರು. ಹೀಗಾಗಿ ಬಿಜೆಪಿ ಸೇರುತ್ತಾರೆಂದು ವದಂತಿಯೂ ಹಬ್ಬಿತ್ತು. ಆದರೆ, ಹೊಸ ಪಕ್ಷ ಸ್ಥಾಪಿಸಿ ಬಿಜೆಪಿ ಜೊತೆ ಮೈತ್ರಿ ಸ್ಥಾಪಿಸುವ ಬಗ್ಗೆ ಸಿಂಗ್ ಸುಳಿವು ನೀಡಿದ್ದರು. ಇದೀಗ ಹೊಸ ಪಕ್ಷ ಘೋಷಣೆಯಾಗಿದ್ದು, ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಸಿಧು ವಿರುದ್ಧ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಬಹುಕಾಲದಿಂದ ಪಂಜಾಬ್ ನಲ್ಲಿ ಕಾಂಗ್ರೆಸ್ ಅಧಿಪತ್ಯ ಉಳಿಸಿಕೊಂಡಿದ್ದು, ಮುಂದಿನ ಬಾರಿ ಬದಲಾಗುತ್ತಾ ಅನ್ನುವ ನಿರೀಕ್ಷೆ ಗರಿಗೆದರಿದೆ.
Over a month after leaving the Congress, former Punjab Chief Minister Captain Amarinder Singh on Tuesday revealed the name of his new party as Punjab Lok Congress. The registration of the party is pending approval with the Election Commission of India. Disclosing the party's name in Chandigarh on Tuesday, Captain Amarinder Singh said, "Since we had announced earlier that we would be forming our own party, our team of lawyers was working on the process and had applied to the Election Commission of India for the registration."
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm