ಬ್ರೇಕಿಂಗ್ ನ್ಯೂಸ್
02-11-21 07:21 pm Headline Karnataka News Network ಕರಾವಳಿ
ನವದೆಹಲಿ, ನ.2: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಹೊಸ ಪಕ್ಷಕ್ಕೆ ಪಂಜಾಬ್ ಲೋಕ್ ಕಾಂಗ್ರೆಸ್ ಎಂದು ಹೆಸರಿಟ್ಟಿದ್ದು, ನವಜೋತ್ ಸಿಂಗ್ ಸಿಧು ನೇತೃತ್ವದ ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಪತ್ರವನ್ನೂ ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿಗೆ ಸಲ್ಲಿಸಿದ್ದಾರೆ.
ನಾನು ಸೋನಿಯಾ ಗಾಂಧಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದು, ಅದರಲ್ಲಿ ರಾಜಿನಾಮೆಗೆ ಕಾರಣವನ್ನೂ ಉಲ್ಲೇಖಿಸಿದ್ದೇನೆ. ಪಂಜಾಬ್ ಲೋಕ್ ಕಾಂಗ್ರೆಸ್ ಅನ್ನುವುದು ಹೊಸ ಪಕ್ಷವಾಗಿದ್ದು, ಅದರ ಚಿಹ್ನೆ ಇನ್ನಷ್ಟೇ ಅಂತಿಮ ಆಗಬೇಕಿದೆ. ಚುನಾವಣಾ ಆಯೋಗದಲ್ಲಿ ನೋಂದಣಿ ಇನ್ನೂ ಅಂತಿಮಗೊಂಡಿಲ್ಲ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ತಿಂಗಳ ಹಿಂದಷ್ಟೇ ಪಂಜಾಬ್ ಮುಖ್ಯಮಂತ್ರಿ ಪದವಿಯಿಂದ ಅಮರಿಂದರ್ ಸಿಂಗ್ ರಾಜಿನಾಮೆ ನೀಡಿ ಹೊರನಡೆದಿದ್ದರು. ಪಂಜಾಬ್ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಜೊತೆಯಲ್ಲಿ ಜಟಾಪಟಿ ನಡೆದ ಬಳಿಕ ಈ ಬೆಳವಣಿಗೆ ನಡೆದಿತ್ತು. ಆನಂತರ ಸಿಖ್ ಸಮುದಾಯದ ಹಿಂದುಳಿದ ವರ್ಗದ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಸಿಎಂ ಪದವಿಗೆ ಏರಿಸಲಾಗಿತ್ತು.
ಸಿಎಂ ಪದವಿಯಿಂದ ಕೆಳಗಿಳಿದ ಬಳಿಕ ಹೊಸ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದರು. ಅಲ್ಲದೆ, ಬಿಜೆಪಿ ನಾಯಕರು ಕೂಡ ಅವರನ್ನು ದೆಹಲಿಗೆ ಕರೆದು ಮಾತನಾಡಿದ್ದರು. ಹೀಗಾಗಿ ಬಿಜೆಪಿ ಸೇರುತ್ತಾರೆಂದು ವದಂತಿಯೂ ಹಬ್ಬಿತ್ತು. ಆದರೆ, ಹೊಸ ಪಕ್ಷ ಸ್ಥಾಪಿಸಿ ಬಿಜೆಪಿ ಜೊತೆ ಮೈತ್ರಿ ಸ್ಥಾಪಿಸುವ ಬಗ್ಗೆ ಸಿಂಗ್ ಸುಳಿವು ನೀಡಿದ್ದರು. ಇದೀಗ ಹೊಸ ಪಕ್ಷ ಘೋಷಣೆಯಾಗಿದ್ದು, ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಸಿಧು ವಿರುದ್ಧ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಬಹುಕಾಲದಿಂದ ಪಂಜಾಬ್ ನಲ್ಲಿ ಕಾಂಗ್ರೆಸ್ ಅಧಿಪತ್ಯ ಉಳಿಸಿಕೊಂಡಿದ್ದು, ಮುಂದಿನ ಬಾರಿ ಬದಲಾಗುತ್ತಾ ಅನ್ನುವ ನಿರೀಕ್ಷೆ ಗರಿಗೆದರಿದೆ.
Over a month after leaving the Congress, former Punjab Chief Minister Captain Amarinder Singh on Tuesday revealed the name of his new party as Punjab Lok Congress. The registration of the party is pending approval with the Election Commission of India. Disclosing the party's name in Chandigarh on Tuesday, Captain Amarinder Singh said, "Since we had announced earlier that we would be forming our own party, our team of lawyers was working on the process and had applied to the Election Commission of India for the registration."
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm