ಬ್ರೇಕಿಂಗ್ ನ್ಯೂಸ್
02-11-21 07:21 pm Headline Karnataka News Network ಕರಾವಳಿ
ನವದೆಹಲಿ, ನ.2: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಹೊಸ ಪಕ್ಷಕ್ಕೆ ಪಂಜಾಬ್ ಲೋಕ್ ಕಾಂಗ್ರೆಸ್ ಎಂದು ಹೆಸರಿಟ್ಟಿದ್ದು, ನವಜೋತ್ ಸಿಂಗ್ ಸಿಧು ನೇತೃತ್ವದ ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಪತ್ರವನ್ನೂ ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿಗೆ ಸಲ್ಲಿಸಿದ್ದಾರೆ.
ನಾನು ಸೋನಿಯಾ ಗಾಂಧಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದು, ಅದರಲ್ಲಿ ರಾಜಿನಾಮೆಗೆ ಕಾರಣವನ್ನೂ ಉಲ್ಲೇಖಿಸಿದ್ದೇನೆ. ಪಂಜಾಬ್ ಲೋಕ್ ಕಾಂಗ್ರೆಸ್ ಅನ್ನುವುದು ಹೊಸ ಪಕ್ಷವಾಗಿದ್ದು, ಅದರ ಚಿಹ್ನೆ ಇನ್ನಷ್ಟೇ ಅಂತಿಮ ಆಗಬೇಕಿದೆ. ಚುನಾವಣಾ ಆಯೋಗದಲ್ಲಿ ನೋಂದಣಿ ಇನ್ನೂ ಅಂತಿಮಗೊಂಡಿಲ್ಲ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ತಿಂಗಳ ಹಿಂದಷ್ಟೇ ಪಂಜಾಬ್ ಮುಖ್ಯಮಂತ್ರಿ ಪದವಿಯಿಂದ ಅಮರಿಂದರ್ ಸಿಂಗ್ ರಾಜಿನಾಮೆ ನೀಡಿ ಹೊರನಡೆದಿದ್ದರು. ಪಂಜಾಬ್ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಜೊತೆಯಲ್ಲಿ ಜಟಾಪಟಿ ನಡೆದ ಬಳಿಕ ಈ ಬೆಳವಣಿಗೆ ನಡೆದಿತ್ತು. ಆನಂತರ ಸಿಖ್ ಸಮುದಾಯದ ಹಿಂದುಳಿದ ವರ್ಗದ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಸಿಎಂ ಪದವಿಗೆ ಏರಿಸಲಾಗಿತ್ತು.
ಸಿಎಂ ಪದವಿಯಿಂದ ಕೆಳಗಿಳಿದ ಬಳಿಕ ಹೊಸ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದರು. ಅಲ್ಲದೆ, ಬಿಜೆಪಿ ನಾಯಕರು ಕೂಡ ಅವರನ್ನು ದೆಹಲಿಗೆ ಕರೆದು ಮಾತನಾಡಿದ್ದರು. ಹೀಗಾಗಿ ಬಿಜೆಪಿ ಸೇರುತ್ತಾರೆಂದು ವದಂತಿಯೂ ಹಬ್ಬಿತ್ತು. ಆದರೆ, ಹೊಸ ಪಕ್ಷ ಸ್ಥಾಪಿಸಿ ಬಿಜೆಪಿ ಜೊತೆ ಮೈತ್ರಿ ಸ್ಥಾಪಿಸುವ ಬಗ್ಗೆ ಸಿಂಗ್ ಸುಳಿವು ನೀಡಿದ್ದರು. ಇದೀಗ ಹೊಸ ಪಕ್ಷ ಘೋಷಣೆಯಾಗಿದ್ದು, ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಸಿಧು ವಿರುದ್ಧ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಬಹುಕಾಲದಿಂದ ಪಂಜಾಬ್ ನಲ್ಲಿ ಕಾಂಗ್ರೆಸ್ ಅಧಿಪತ್ಯ ಉಳಿಸಿಕೊಂಡಿದ್ದು, ಮುಂದಿನ ಬಾರಿ ಬದಲಾಗುತ್ತಾ ಅನ್ನುವ ನಿರೀಕ್ಷೆ ಗರಿಗೆದರಿದೆ.
Over a month after leaving the Congress, former Punjab Chief Minister Captain Amarinder Singh on Tuesday revealed the name of his new party as Punjab Lok Congress. The registration of the party is pending approval with the Election Commission of India. Disclosing the party's name in Chandigarh on Tuesday, Captain Amarinder Singh said, "Since we had announced earlier that we would be forming our own party, our team of lawyers was working on the process and had applied to the Election Commission of India for the registration."
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm