ಬ್ರೇಕಿಂಗ್ ನ್ಯೂಸ್
04-11-21 12:44 pm Mangaluru Correspondent ಕರಾವಳಿ
ಉಳ್ಳಾಲ, ನ.4: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕುಂಪಲ, ಪಿಲಾರು ಪಳ್ಳ ಪ್ರದೇಶಗಳಲ್ಲಿ ಚಿರತೆ ಸುತ್ತಾಡುತ್ತಿರುವ ಬಗ್ಗೆ ಇಬ್ಬರು ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಕಾರಣ ಇಂದು ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಿಲಾರು ಪಳ್ಳ ನಿವಾಸಿ ಶಿವರಾಜ್ ಪೊಣ್ಣುಸ್ವಾಮಿ ಎಂಬವರು ಮೊನ್ನೆ ಶನಿವಾರ ರಾತ್ರಿ 9.30 ಗಂಟೆ ಸುಮಾರಿಗೆ ತನ್ನ ಮನೆಯಿಂದ ಮಗಳ ಮನೆಗೆ ತೆರಳುತ್ತಿದ್ದ ವೇಳೆ ಮನೆಯ ಬಳಿಯೇ ಚಿರತೆಯೊಂದು ರಸ್ತೆ ದಾಟಿ ಪೊದೆಯೊಳಗೆ ನುಗ್ಗಿದನ್ನ ಕಣ್ಣಾರೆ ಕಂಡಿದ್ದರು. ಮೊದಲಿಗೆ ಶಿವರಾಜ್ ಅವರು ಬೆಕ್ಕೆಂದು ಗ್ರಹಿಸಿದರೂ ಅದರ ಉದ್ದನೆಯ ಬಾಲ ಮತ್ತು ಬಣ್ಣವನ್ನ ಕಂಡು ಸಣ್ಣ ಗಾತ್ರದ ಚಿರತೆಯೆಂದು ಮನದಟ್ಟು ಮಾಡಿದ್ದು ಈ ಬಗ್ಗೆ ಮಾಧ್ಯಮಕ್ಕೂ ಮಾಹಿತಿ ನೀಡಿದ್ದರು.
ಕುಂಪಲ ಸರಳಾಯ ಕಾಲನಿ ನಿವಾಸಿ ಮೌರಿಷ್ ಡಿಸೋಜ ಅವರು ಶುಕ್ರವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಸಣ್ಣ ಗಾತ್ರದ ಚಿರತೆ ಎದುರಾಗಿದ್ದು ಆಕ್ರೋಶದಿಂದ ಮೌರಿಷ್ ಅವರನ್ನು ದಿಟ್ಟಿಸಿ ಭುಸುಗುಟ್ಟಿ ಮರೆಯಾಗಿತ್ತು. ಈ ಬಗ್ಗೆ ಮೌರಿಷ್ ಡಿ ಸೋಜಾ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದರು.




ಕುಂಪಲ ಬಾಲಕೃಷ್ಣ ಮಂದಿರ ಪರಿಸರದ ಕೃಷ್ಣನಗರ ಎಂಬಲ್ಲಿನ ಒಂದು ಎಕರೆ ಕಾಡು ಪ್ರದೇಶದಲ್ಲಿ ಬೀದಿ ನಾಯಿಯನ್ನ ಕಾಡು ಪ್ರಾಣಿ ಅರ್ಧ ಭಕ್ಷಿಸಿದ ಸ್ಥಿತಿಯಲ್ಲಿರುವುದನ್ನು ಸ್ಥಳೀಯರು ಕಂಡಿದ್ದಾರೆ. ಆ ಪ್ರದೇಶಕ್ಕೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಲ್ಲಿ ಯಾವುದೇ ಪುರಾವೆ ದೊರೆತಿಲ್ಲ. ಇಬ್ಬರು ಪ್ರತ್ಯಕ್ಷದರ್ಶಿಗಳು ಚಿರತೆಯನ್ನ ಕಂಡಂತಹ ಪ್ರದೇಶದಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಇನ್ನು ಕುಂಪಲ, ಪಿಲಾರುವಿನ ಸ್ಥಳೀಯ ವಾಟ್ಸಪ್ ಗ್ರೂಪ್ ಗಳಲ್ಲಿ ಚಿರತೆಯೊಂದು ಪೊದೆಯೊಳಗೆ ನುಗ್ಗುತ್ತಿರುವ ಫೋಟೊ ವೈರಲ್ ಆಗುತ್ತಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡುವಂತಾಗಿದೆ. ವಾಟ್ಸಪ್ ಗ್ರೂಪಲ್ಲಿ ಹರಿದಾಡುತ್ತಿರುವ ಚಿರತೆಯ ಫೋಟೊ ಕುಂಪಲ, ಪಿಲಾರು ಪ್ರದೇಶದ್ದೇ ಎನ್ನುವುದಕ್ಕೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲ.
ಕುಂಪಲ, ಪಿಲಾರು ಪ್ರದೇಶದಲ್ಲಿ ಚಿರತೆ ಇರುವಿಕೆಯ ಬಗ್ಗೆ ಪ್ರತ್ಯಕ್ಷದರ್ಶಿಗಳ ಹೇಳಿಕೆ ಬಿಟ್ಟರೆ ಬೇರೆ ಯಾವುದೇ ಸಿಸಿಟಿವಿ ದಾಖಲೆ, ಹೆಜ್ಜೆ ಗುರುತು ಪತ್ತೆಯಾಗಿಲ್ಲ. ಆದರೂ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದು ಮತ್ತೆ ಚಿರತೆಯನ್ನ ಯಾರಾದರೂ ಕಂಡಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಕೋರಿದ್ದೇವೆ. ಚಿರತೆ ಇರುವುದು ಖಾತರಿಯಾದರೆ ಬೋನನ್ನು ಇಟ್ಟು ಕಾರ್ಯಾಚರಣೆ ನಡೆಸುವುದಾಗಿ ಸ್ಥಳ ಪರಿಶೀಲಿಸಿದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ತಿಳಿಸಿದ್ದಾರೆ.
ಸ್ಥಳೀಯರಾದ ಸಚಿನ್ ಮಡಿವಾಳ, ಕೊಣಾಜೆ ಬೀಟ್ ಫಾರೆಸ್ಟ್ ಗಾರ್ಡ್ ಸವಿತಾ ಗಟ್ಟಿ, ಅರಣ್ಯ ರಕ್ಷಕಿ ಸೌಮ್ಯ ಕೆ. ಮೊದಲಾದವರು ಜೊತೆಗಿದ್ದರು.
Mangalore Kumpala Resident spots Cheetah near Pillar Forest officials visit spot. Few days ago they were rumours that Cheetah was seen by some people but again last night Pillar resident who saw the cheetah has put localities in great fear.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm