ಬ್ರೇಕಿಂಗ್ ನ್ಯೂಸ್
06-11-21 02:16 pm Mangaluru Correspondent ಕರಾವಳಿ
ಮಂಗಳೂರು, ನ.6: ಮೀನುಗಾರಿಕೆ ನಡೆಸುತ್ತಿದ್ದ ಬೋಟಿನ ಇಂಜಿನ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ಅಪಾಯಕ್ಕೀಡಾಗಿದ್ದ ಏಳು ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ. ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ.
ಅಪಾಯದ ಬಗ್ಗೆ ಮಾಹಿತಿ ಪಡೆದ ನವ ಮಂಗಳೂರು ಬಂದರು ಬಳಿಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು ಘಟನಾ ಸ್ಥಳಕ್ಕೆ ತೆರಳಿ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿ ಅನಾಹುತವನ್ನು ತಪ್ಪಿಸಿದ್ದಾರೆ. ಕಾರವಾರದಿಂದ ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ ಮೀನುಗಾರಿಕಾ ಬೋಟ್ನಲ್ಲಿ ಏಕಾಏಕಿ ಶಾಟ್ ಸರ್ಕ್ಯೂಟ್ ಉಂಟಾಗಿದ್ದು, ಇದರಿಂದ ಇಡೀ ಬೋಟ್ಗೆ ಹತ್ತಿಕೊಂಡಿತ್ತು.


ಬೆಂಕಿ ಅವಘಡದ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಮಂಗಳೂರು ಕಚೇರಿಗೆ ರಾತ್ರಿ ಹತ್ತು ಗಂಟೆ ವೇಳೆಗೆ ಮಾಹಿತಿ ನೀಡಲಾಗಿತ್ತು. ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ವರದಾ ವಿನಾಯಕ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ.
ಅಪಾಯಕ್ಕೀಡಾಗಿದ್ದ ಮೀನುಗಾರರು ಸುರಕ್ಷಿತರಾಗಿದ್ದು ಸೇಫ್ ಆಗಿ ಮರಳಿ ಕಾರವಾರ ಸೇರಿದ್ದಾರೆ. ಇದೇ ವೇಳೆ, ದುರಂತಕ್ಕೀಡಾದ ಬೋಟನ್ನೂ ಕೋಸ್ಟ್ ಗಾರ್ಡ್ ಪಡೆ ಸಮುದ್ರದಲ್ಲಿ ಎಳ್ಕೊಂಡು ಬಂದು ಕಾರವಾರ ತಲುಪಿಸಿದೆ.
he timely and swift action by the Indian Coast Guard had saved the lives of 7 fishermen in distress due to fire engulfed on a fishing boat IFB Varda Vinayaka-I (IND KA 02 MM 4495) due to a short circuit in the wheelhouse. The fishing boat was at a distance of 10 NM from Karwar lighthouse.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm