ಬ್ರೇಕಿಂಗ್ ನ್ಯೂಸ್
07-11-21 02:01 pm Mangaluru Correspondent ಕರಾವಳಿ
ಉಳ್ಳಾಲ, ನ.7: ತೊಕ್ಕೊಟ್ಟಿನಿಂದ ಕುತ್ತಾರು ತನಕದ ಮಂಗಳೂರು ವಿ.ವಿ ರಸ್ತೆಯು ಅಗಲೀಕರಣಗೊಳ್ಳುತ್ತಿದ್ದು , ಬಬ್ಬುಕಟ್ಟೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಸಮರ್ಪಕ ತಡೆಗೋಡೆ ಕಾಮಗಾರಿಯಿಂದಾಗಿ ಮಳೆ ನೀರು ಆಸುಪಾಸಿನ ಅಂಗಡಿ, ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.
ತೊಕ್ಕೊಟ್ಟು- ಕುತ್ತಾರು ವಿವಿ ರಸ್ತೆ ಅಗಲೀಕರಣ ಆಗುತ್ತಿರುವುದರಿಂದ ಬಬ್ಬುಕಟ್ಟೆಯಲ್ಲಿ ರಸ್ತೆ ಅಂಚಿಗೆ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ಮುನ್ನೆಚ್ಚರಿಕೆ ವಹಿಸದೆ ತಡೆಗೋಡೆ ನಿರ್ಮಾಣ ಕೆಲಸ ನಡೆಸುತ್ತಿರುವ ಪರಿಣಾಮ ನಿನ್ನೆ ರಾತ್ರಿ ಸುರಿದ ಮಳೆ ನೀರು ಪರಿಸರದ ಅನೇಕ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬಬ್ಬುಕಟ್ಟೆ ರಸ್ತೆಯ ಪಕ್ಕದ ಪಿಲಾರು ಹೊಸಗದ್ದೆ ಪರಿಸರದ ಇಪ್ಪತ್ತಕ್ಕೂ ಹೆಚ್ಚು ಮನೆಗಳು, ಅಂಗಡಿಗಳಿಗೆ ಮಳೆ ನೀರು ನುಗ್ಗಿದೆ.





ಪಿಲಾರು ಹೊಸಗದ್ದೆ ನಿವಾಸಿ ಎವರೆಸ್ಟ್ ಡಿ ಸೋಜಾ ಅವರ ವಾಣಿಜ್ಯ ಸಂಕೀರ್ಣ, ಮನೆಗಳಿಗೆ ಮಳೆ ನೀರು ನುಗ್ಗಿದ್ದಲ್ಲದೆ , ಮನೆ ಅಂಗಳದ ಬಾವಿಗೂ ಮಳೆಯ ಕೊಳಚೆ ನೀರು ಸೇರಿ ಕಲುಷಿತಗೊಂಡಿದೆ. ಪಿಲಾರು ಹೊಸಗದ್ದೆ ಪರಿಸರದಲ್ಲಿ ಉಳ್ಳಾಲ ನಗರಸಭೆ ನಿರ್ಮಿಸಿರುವ ಚರಂಡಿ ಕಾಮಗಾರಿಯೂ ಅವೈಜ್ಞಾನಿಕವಾಗಿದ್ದು ಕಳೆದ ವರ್ಷವೂ ಇದೇ ರೀತಿ ಮಳೆ ನೀರು ರಸ್ತೆಯಲ್ಲೇ ಉಕ್ಕಿ ಹರಿದು ಮನೆಗಳಿಗೆ ನುಗ್ಗಿದೆಯೆಂದು ಸ್ಥಳೀಯರು ಆರೋಪಿಸಿದ್ದಾರೆ.


ಸ್ಥಳಕ್ಕೆ ರಸ್ತೆ ಅಗಲೀಕರಣ ಕಾಮಗಾರಿಯ ಗುತ್ತಿಗೆ ಕಂಪನಿಯ ಮುಖ್ಯಸ್ಥ ಭೇಟಿ ನೀಡಿದ್ದು ಸ್ಥಳೀಯರು ಆತನನ್ನ ತರಾಟೆಗೆ ತೆಗೆದಿದ್ದಾರೆ. ತಡೆಗೋಡೆ ಕಾಮಗಾರಿ ನಡೆಸುವಾಗ ಮುನ್ನೆಚ್ಚರಿಕೆ ವಹಿಸದೆ ನಿರ್ಲಕ್ಷ್ಯ ವಹಿಸಿದ ಫಲವಾಗಿ ಮಳೆನೀರು ರಾಜಕಾಲುವೆ ಬಿಟ್ಟು ಮನೆಗಳಿಗೆ ನುಗ್ಗಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಸಂಜೆಯೊಳಗೆ ಸಮಸ್ಯೆಯನ್ನ ಬಗೆಹರಿಸಿ ಕೊಡುವುದಾಗಿ ಗುತ್ತಿಗೆ ಕಂಪನಿ ಮುಖ್ಯಸ್ಥರು ಸ್ಥಳೀಯರಿಗೆ ಭರವಸೆ ಕೊಟ್ಟಿದ್ದಾರೆ.
Road Widening creates havoc after heavy rains, Houses lashed with rainwater in Thokottu.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm