ಬ್ರೇಕಿಂಗ್ ನ್ಯೂಸ್
07-11-21 02:01 pm Mangaluru Correspondent ಕರಾವಳಿ
ಉಳ್ಳಾಲ, ನ.7: ತೊಕ್ಕೊಟ್ಟಿನಿಂದ ಕುತ್ತಾರು ತನಕದ ಮಂಗಳೂರು ವಿ.ವಿ ರಸ್ತೆಯು ಅಗಲೀಕರಣಗೊಳ್ಳುತ್ತಿದ್ದು , ಬಬ್ಬುಕಟ್ಟೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಸಮರ್ಪಕ ತಡೆಗೋಡೆ ಕಾಮಗಾರಿಯಿಂದಾಗಿ ಮಳೆ ನೀರು ಆಸುಪಾಸಿನ ಅಂಗಡಿ, ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.
ತೊಕ್ಕೊಟ್ಟು- ಕುತ್ತಾರು ವಿವಿ ರಸ್ತೆ ಅಗಲೀಕರಣ ಆಗುತ್ತಿರುವುದರಿಂದ ಬಬ್ಬುಕಟ್ಟೆಯಲ್ಲಿ ರಸ್ತೆ ಅಂಚಿಗೆ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ಮುನ್ನೆಚ್ಚರಿಕೆ ವಹಿಸದೆ ತಡೆಗೋಡೆ ನಿರ್ಮಾಣ ಕೆಲಸ ನಡೆಸುತ್ತಿರುವ ಪರಿಣಾಮ ನಿನ್ನೆ ರಾತ್ರಿ ಸುರಿದ ಮಳೆ ನೀರು ಪರಿಸರದ ಅನೇಕ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬಬ್ಬುಕಟ್ಟೆ ರಸ್ತೆಯ ಪಕ್ಕದ ಪಿಲಾರು ಹೊಸಗದ್ದೆ ಪರಿಸರದ ಇಪ್ಪತ್ತಕ್ಕೂ ಹೆಚ್ಚು ಮನೆಗಳು, ಅಂಗಡಿಗಳಿಗೆ ಮಳೆ ನೀರು ನುಗ್ಗಿದೆ.





ಪಿಲಾರು ಹೊಸಗದ್ದೆ ನಿವಾಸಿ ಎವರೆಸ್ಟ್ ಡಿ ಸೋಜಾ ಅವರ ವಾಣಿಜ್ಯ ಸಂಕೀರ್ಣ, ಮನೆಗಳಿಗೆ ಮಳೆ ನೀರು ನುಗ್ಗಿದ್ದಲ್ಲದೆ , ಮನೆ ಅಂಗಳದ ಬಾವಿಗೂ ಮಳೆಯ ಕೊಳಚೆ ನೀರು ಸೇರಿ ಕಲುಷಿತಗೊಂಡಿದೆ. ಪಿಲಾರು ಹೊಸಗದ್ದೆ ಪರಿಸರದಲ್ಲಿ ಉಳ್ಳಾಲ ನಗರಸಭೆ ನಿರ್ಮಿಸಿರುವ ಚರಂಡಿ ಕಾಮಗಾರಿಯೂ ಅವೈಜ್ಞಾನಿಕವಾಗಿದ್ದು ಕಳೆದ ವರ್ಷವೂ ಇದೇ ರೀತಿ ಮಳೆ ನೀರು ರಸ್ತೆಯಲ್ಲೇ ಉಕ್ಕಿ ಹರಿದು ಮನೆಗಳಿಗೆ ನುಗ್ಗಿದೆಯೆಂದು ಸ್ಥಳೀಯರು ಆರೋಪಿಸಿದ್ದಾರೆ.


ಸ್ಥಳಕ್ಕೆ ರಸ್ತೆ ಅಗಲೀಕರಣ ಕಾಮಗಾರಿಯ ಗುತ್ತಿಗೆ ಕಂಪನಿಯ ಮುಖ್ಯಸ್ಥ ಭೇಟಿ ನೀಡಿದ್ದು ಸ್ಥಳೀಯರು ಆತನನ್ನ ತರಾಟೆಗೆ ತೆಗೆದಿದ್ದಾರೆ. ತಡೆಗೋಡೆ ಕಾಮಗಾರಿ ನಡೆಸುವಾಗ ಮುನ್ನೆಚ್ಚರಿಕೆ ವಹಿಸದೆ ನಿರ್ಲಕ್ಷ್ಯ ವಹಿಸಿದ ಫಲವಾಗಿ ಮಳೆನೀರು ರಾಜಕಾಲುವೆ ಬಿಟ್ಟು ಮನೆಗಳಿಗೆ ನುಗ್ಗಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಸಂಜೆಯೊಳಗೆ ಸಮಸ್ಯೆಯನ್ನ ಬಗೆಹರಿಸಿ ಕೊಡುವುದಾಗಿ ಗುತ್ತಿಗೆ ಕಂಪನಿ ಮುಖ್ಯಸ್ಥರು ಸ್ಥಳೀಯರಿಗೆ ಭರವಸೆ ಕೊಟ್ಟಿದ್ದಾರೆ.
Road Widening creates havoc after heavy rains, Houses lashed with rainwater in Thokottu.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm