ಬ್ರೇಕಿಂಗ್ ನ್ಯೂಸ್
07-11-21 02:01 pm Mangaluru Correspondent ಕರಾವಳಿ
ಉಳ್ಳಾಲ, ನ.7: ತೊಕ್ಕೊಟ್ಟಿನಿಂದ ಕುತ್ತಾರು ತನಕದ ಮಂಗಳೂರು ವಿ.ವಿ ರಸ್ತೆಯು ಅಗಲೀಕರಣಗೊಳ್ಳುತ್ತಿದ್ದು , ಬಬ್ಬುಕಟ್ಟೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಸಮರ್ಪಕ ತಡೆಗೋಡೆ ಕಾಮಗಾರಿಯಿಂದಾಗಿ ಮಳೆ ನೀರು ಆಸುಪಾಸಿನ ಅಂಗಡಿ, ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.
ತೊಕ್ಕೊಟ್ಟು- ಕುತ್ತಾರು ವಿವಿ ರಸ್ತೆ ಅಗಲೀಕರಣ ಆಗುತ್ತಿರುವುದರಿಂದ ಬಬ್ಬುಕಟ್ಟೆಯಲ್ಲಿ ರಸ್ತೆ ಅಂಚಿಗೆ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ಮುನ್ನೆಚ್ಚರಿಕೆ ವಹಿಸದೆ ತಡೆಗೋಡೆ ನಿರ್ಮಾಣ ಕೆಲಸ ನಡೆಸುತ್ತಿರುವ ಪರಿಣಾಮ ನಿನ್ನೆ ರಾತ್ರಿ ಸುರಿದ ಮಳೆ ನೀರು ಪರಿಸರದ ಅನೇಕ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬಬ್ಬುಕಟ್ಟೆ ರಸ್ತೆಯ ಪಕ್ಕದ ಪಿಲಾರು ಹೊಸಗದ್ದೆ ಪರಿಸರದ ಇಪ್ಪತ್ತಕ್ಕೂ ಹೆಚ್ಚು ಮನೆಗಳು, ಅಂಗಡಿಗಳಿಗೆ ಮಳೆ ನೀರು ನುಗ್ಗಿದೆ.





ಪಿಲಾರು ಹೊಸಗದ್ದೆ ನಿವಾಸಿ ಎವರೆಸ್ಟ್ ಡಿ ಸೋಜಾ ಅವರ ವಾಣಿಜ್ಯ ಸಂಕೀರ್ಣ, ಮನೆಗಳಿಗೆ ಮಳೆ ನೀರು ನುಗ್ಗಿದ್ದಲ್ಲದೆ , ಮನೆ ಅಂಗಳದ ಬಾವಿಗೂ ಮಳೆಯ ಕೊಳಚೆ ನೀರು ಸೇರಿ ಕಲುಷಿತಗೊಂಡಿದೆ. ಪಿಲಾರು ಹೊಸಗದ್ದೆ ಪರಿಸರದಲ್ಲಿ ಉಳ್ಳಾಲ ನಗರಸಭೆ ನಿರ್ಮಿಸಿರುವ ಚರಂಡಿ ಕಾಮಗಾರಿಯೂ ಅವೈಜ್ಞಾನಿಕವಾಗಿದ್ದು ಕಳೆದ ವರ್ಷವೂ ಇದೇ ರೀತಿ ಮಳೆ ನೀರು ರಸ್ತೆಯಲ್ಲೇ ಉಕ್ಕಿ ಹರಿದು ಮನೆಗಳಿಗೆ ನುಗ್ಗಿದೆಯೆಂದು ಸ್ಥಳೀಯರು ಆರೋಪಿಸಿದ್ದಾರೆ.


ಸ್ಥಳಕ್ಕೆ ರಸ್ತೆ ಅಗಲೀಕರಣ ಕಾಮಗಾರಿಯ ಗುತ್ತಿಗೆ ಕಂಪನಿಯ ಮುಖ್ಯಸ್ಥ ಭೇಟಿ ನೀಡಿದ್ದು ಸ್ಥಳೀಯರು ಆತನನ್ನ ತರಾಟೆಗೆ ತೆಗೆದಿದ್ದಾರೆ. ತಡೆಗೋಡೆ ಕಾಮಗಾರಿ ನಡೆಸುವಾಗ ಮುನ್ನೆಚ್ಚರಿಕೆ ವಹಿಸದೆ ನಿರ್ಲಕ್ಷ್ಯ ವಹಿಸಿದ ಫಲವಾಗಿ ಮಳೆನೀರು ರಾಜಕಾಲುವೆ ಬಿಟ್ಟು ಮನೆಗಳಿಗೆ ನುಗ್ಗಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಸಂಜೆಯೊಳಗೆ ಸಮಸ್ಯೆಯನ್ನ ಬಗೆಹರಿಸಿ ಕೊಡುವುದಾಗಿ ಗುತ್ತಿಗೆ ಕಂಪನಿ ಮುಖ್ಯಸ್ಥರು ಸ್ಥಳೀಯರಿಗೆ ಭರವಸೆ ಕೊಟ್ಟಿದ್ದಾರೆ.
Road Widening creates havoc after heavy rains, Houses lashed with rainwater in Thokottu.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm