ಬ್ರೇಕಿಂಗ್ ನ್ಯೂಸ್
12-11-21 11:30 am Mangaluru correspondent ಕರಾವಳಿ
ಮಂಗಳೂರು, ನ.12: ಸೌದಿ ಅರೇಬಿಯಾದ ದೊರೆ ಮತ್ತು ಇಸ್ಲಾಂ ಬಗ್ಗೆ ಫೇಸ್ ಬುಕ್ನಲ್ಲಿ ಅವಹೇಳನ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಅಲ್ಲಿ ನೌಕರಿಯಲ್ಲಿದ್ದ ಮಂಗಳೂರಿನ ಬಿಕರ್ನಕಟ್ಟೆ ನಿವಾಸಿ ಶೈಲೇಶ್ ಕುಮಾರ್ ಅವರನ್ನು ಜೈಲಿನಲ್ಲಿ ಇರಿಸಲಾಗಿದೆ. ಶೈಲೇಶ್ ಹೆಸರಲ್ಲಿ ಯಾರೋ ನಕಲಿ ಖಾತೆ ತೆರೆದು, ಇಸ್ಲಾಂ ಬಗ್ಗೆ ಪೋಸ್ಟ್ ಮಾಡಿದ್ದು ಈಗ ಜೈಲು ಸೇರುವಂತಾಗಿದೆ.
ಈ ಬಗ್ಗೆ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಸುದ್ದಿಗೋಷ್ಟಿ ನಡೆಸಿದ್ದು ನಕಲಿ ಫೇಸ್ಬುಕ್ ಜಾಲದಿಂದಾಗಿ ತಪ್ಪು ಮಾಡದ ವ್ಯಕ್ತಿ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಹೇಳಿದ್ದಾರೆ. ಶೈಲೇಶ್ ಅವರನ್ನು ಬಿಡುಗಡೆಗೊಳಿಸಲು ಪ್ರಧಾನಮಂತ್ರಿ, ಕೇಂದ್ರ ವಿದೇಶಾಂಗ ಇಲಾಖೆ ಮತ್ತು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದವರು ಆಗ್ರಹಿಸಿದರು.

ದೂರು ನೀಡಲು ಹೋಗಿದ್ದಾಗಲೇ ಪೊಲೀಸರಿಂದ ಬಂಧನ
25 ವರ್ಷಗಳಿಂದ ಸೌದಿಯ ಕಂಪೆನಿ ಒಂದರಲ್ಲಿ ಉದ್ಯೋಗದಲ್ಲಿದ್ದ ಶೈಲೇಶ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಅದರಲ್ಲಿ ಇಸ್ಲಾಂಗೆ ವಿರುದ್ಧವಾಗಿ ಮತ್ತು ಸೌದಿ ದೊರೆಗೆ ಅವಹೇಳನ ಮಾಡುವ ಪೋಸ್ಟ್ಗಳನ್ನು ಯಾರೋ ಹಾಕಿದ್ದರು. ಫೇಸ್ಬುಕ್ನಲ್ಲಿ ನಕಲಿ ಐಡಿ ಸೃಷ್ಟಿಸುವ ಕೆಲವು ದಿನಗಳ ಮೊದಲು ಅನಾಮಿಕ ವ್ಯಕ್ತಿಯೋರ್ವ ಕರೆ ಮಾಡಿ ನಿನ್ನ ಫೇಸ್ಬುಕ್ ಖಾತೆಯನ್ನು ಕೂಡಲೇ ಅಳಿಸಿ ಹಾಕಬೇಕು. ಇಲ್ಲವಾದಲ್ಲಿ ನಿನ್ನನ್ನು ಸೌದಿಯಲ್ಲಿ ಉಳಿಯಲು ಬಿಡುವುದಿಲ್ಲ. ಅಲ್ಲೇ ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದ. ಇದರಿಂದ ಬೆದರಿದ ಶೈಲೇಶ್ ಕೂಡಲೇ ತನ್ನ ಫೇಸ್ಬುಕ್ ಖಾತೆಯನ್ನು ಅಳಿಸಿ ಹಾಕಿದ್ದರು. ಅದಾದ ಬಳಿಕ ಕೆಲವೇ ದಿನಗಳಲ್ಲಿ ನಕಲಿ ಖಾತೆ ಸೃಷ್ಟಿಯಾಗಿದ್ದು ಅದರಲ್ಲಿ ಉದ್ದೇಶಪೂರ್ವಕವಾಗಿ ಈ ರೀತಿ ಬರೆಯಲಾಗಿತ್ತು.
ಈ ಬಗ್ಗೆ ಶೈಲೇಶ್ ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಎಚ್ಆರ್ ಮ್ಯಾನೇಜರ್ಗೆ ಮಾಹಿತಿ ನೀಡಿದ್ದಾರೆ. ಮ್ಯಾನೇಜರ್ ಸೂಚನೆಯಂತೆ ಸ್ಥಳೀಯ ಪೊಲೀಸರಿಗೆ ದೂರು ನೀಡಲು ತೆರಳಿದ ಶೈಲೇಶ್ ಅವರನ್ನೇ ಸೌದಿ ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಸಂಬಂಧಿಕರು ಅಂತರ್ಜಾಲದ ಮೂಲಕ ಸೌದಿ ಅರೇಬಿಯಾದಲ್ಲಿರುವ ಇಂಡಿಯನ್ ಕಾನ್ಸುಲೇಟ್ಗೆ ದೂರು ನೀಡಿದ್ದರು. ಆದರೆ ಈ ದೂರು ಪಡೆದ ರಾಯಭಾರ ಕಚೇರಿ ಯಾವುದೇ ಕಾನೂನು ಕ್ರಮ ಜರಗಿಸಿಲ್ಲ ಎಂದು ಜಿತೇಂದ್ರ ಕೊಟ್ಟಾರಿ ಆರೋಪಿಸಿದರು.
ಭಾರತ ಸರಕಾರದ ವಿದೇಶಾಂಗ ಇಲಾಖೆ ಈ ಬಗ್ಗೆ ಗಮನ ಹರಿಸಿ ಶೈಲೇಶ್ ಅವರನ್ನು ಶೀಘ್ರ ಜೈಲಿನಿಂದ ಬಂಧಮುಕ್ತ ಗೊಳಿಸಲು ಕ್ರಮ ಕೈಗೊಳ್ಳಬೇಕು. ನಕಲಿ ಫೇಸ್ಬುಕ್ ಖಾತೆಯನ್ನು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತರು ವಿಶೇಷವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಶೈಲೇಶ್ ಅವರ ಪತ್ನಿ ಕವಿತಾ, ಸಂಬಂಧಿ ಅನುಷ್ಕಾ ಕೊಟ್ಟಾರಿ, ಶ್ರೇಯಸ್ ಪತ್ರಿಕಾಗೋಷ್ಠಿಯಲ್ಲಿದ್ದರು.
Miscreants create fake facebook ID Deformation post against Islam youth arrested in Saudi for reason
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm