ಬ್ರೇಕಿಂಗ್ ನ್ಯೂಸ್
12-11-21 04:29 pm Mangaluru correspondent ಕರಾವಳಿ
ಮಂಗಳೂರು, ನ.12: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ನಗರದ ಕಂಕನಾಡಿಯಲ್ಲಿ ಕಂಡುಬಂದಿದ್ದು ಕದ್ರಿ ಪೊಲೀಸರು ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ.
ವ್ಯಕ್ತಿಯನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ ಕೊಟ್ಟಾರಿ (44) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿಯ ಬೈಪಾಸ್ ರಸ್ತೆಯ ಬದಿ ಕಾರು ನಿಲ್ಲಿಸಿ, ಅದರೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಾರ್ವಜನಿಕರು ಕಾರನ್ನು ನೋಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪ್ರಶಾಂತ್ ಕುಡಿತದ ಚಟ ಹೊಂದಿದ್ದು ದೈಹಿಕ ಅನಾರೋಗ್ಯ ಹೊಂದಿದ್ದರು. ಖಾಸಗಿ ಕಂಪನಿ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಪ್ರಶಾಂತ್ ವೈದ್ಯರ ಬಳಿ ತಪಾಸಣೆಗೆ ಹೋಗಿದ್ದರು. ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮನೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿ 50 ಸಾವಿರ ಹಣದ ಜೊತೆಗೆ ನಿನ್ನೆ ಸಂಜೆ ಕಾರಿನಲ್ಲಿ ತೆರಳಿದ್ದರು. ರಾತ್ರಿ ಮನೆಗೆ ಬಂದಿರಲಿಲ್ಲ.
ಆದರೆ ಇಂದು ತನ್ನ ಇಕೋ ಸ್ಪೋರ್ಟ್ ಕಾರಿನ ಒಳಗೇ ಪ್ರಶಾಂತ್ ಶವವಾಗಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಹೃದಯಾಘಾತದಿಂದ ಸಾವು ಕಂಡಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ. ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕವೇ ಸಾವಿನ ಬಗ್ಗೆ ಮಾಹಿತಿ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಎಸಿ ಹಾಕಿ, ಗ್ಲಾಸ್ ಬಂದ್ ಮಾಡಿ ಮಲಗಿದ್ದ ಬಳಿಕ ಕಾರು ರಾತ್ರಿ ವೇಳೆ ಆಫ್ ಆಗಿದ್ದರೂ ಉಸಿರುಗಟ್ಟಿ ಸಾವು ಸಂಭವಿಸಬಹುದು ಎನ್ನುತ್ತಾರೆ, ಪೊಲೀಸರು.
A 44-year-old man was found dead in car here on Friday November 12 near Kankanady circle in Mangalore.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm