ಬ್ರೇಕಿಂಗ್ ನ್ಯೂಸ್
12-11-21 04:29 pm Mangaluru correspondent ಕರಾವಳಿ
ಮಂಗಳೂರು, ನ.12: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ನಗರದ ಕಂಕನಾಡಿಯಲ್ಲಿ ಕಂಡುಬಂದಿದ್ದು ಕದ್ರಿ ಪೊಲೀಸರು ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ.
ವ್ಯಕ್ತಿಯನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ ಕೊಟ್ಟಾರಿ (44) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿಯ ಬೈಪಾಸ್ ರಸ್ತೆಯ ಬದಿ ಕಾರು ನಿಲ್ಲಿಸಿ, ಅದರೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಾರ್ವಜನಿಕರು ಕಾರನ್ನು ನೋಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪ್ರಶಾಂತ್ ಕುಡಿತದ ಚಟ ಹೊಂದಿದ್ದು ದೈಹಿಕ ಅನಾರೋಗ್ಯ ಹೊಂದಿದ್ದರು. ಖಾಸಗಿ ಕಂಪನಿ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಪ್ರಶಾಂತ್ ವೈದ್ಯರ ಬಳಿ ತಪಾಸಣೆಗೆ ಹೋಗಿದ್ದರು. ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮನೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿ 50 ಸಾವಿರ ಹಣದ ಜೊತೆಗೆ ನಿನ್ನೆ ಸಂಜೆ ಕಾರಿನಲ್ಲಿ ತೆರಳಿದ್ದರು. ರಾತ್ರಿ ಮನೆಗೆ ಬಂದಿರಲಿಲ್ಲ.
ಆದರೆ ಇಂದು ತನ್ನ ಇಕೋ ಸ್ಪೋರ್ಟ್ ಕಾರಿನ ಒಳಗೇ ಪ್ರಶಾಂತ್ ಶವವಾಗಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಹೃದಯಾಘಾತದಿಂದ ಸಾವು ಕಂಡಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ. ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕವೇ ಸಾವಿನ ಬಗ್ಗೆ ಮಾಹಿತಿ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಎಸಿ ಹಾಕಿ, ಗ್ಲಾಸ್ ಬಂದ್ ಮಾಡಿ ಮಲಗಿದ್ದ ಬಳಿಕ ಕಾರು ರಾತ್ರಿ ವೇಳೆ ಆಫ್ ಆಗಿದ್ದರೂ ಉಸಿರುಗಟ್ಟಿ ಸಾವು ಸಂಭವಿಸಬಹುದು ಎನ್ನುತ್ತಾರೆ, ಪೊಲೀಸರು.
A 44-year-old man was found dead in car here on Friday November 12 near Kankanady circle in Mangalore.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm