ಬ್ರೇಕಿಂಗ್ ನ್ಯೂಸ್
12-11-21 08:47 pm Mangaluru Corespondent ಕರಾವಳಿ
ಬೆಳ್ತಂಗಡಿ, ನ.12: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ನುಗ್ಗಿ 12 ಲಕ್ಷ ರೂ. ಮೌಲ್ಯದ ಸುಮಾರು 320 ಗ್ರಾಮ್ ಚಿನ್ನಾಭರಣವನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅ.31 ರಂದು ಇಂದಬೆಟ್ಟು ಗ್ರಾಮದ ಮಹಮ್ಮದ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಕಳವು ಕೃತ್ಯ ನಡೆಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕೃತ್ಯ ಎಸಗಿದ್ದರು. ಕಪಾಟಿನಲ್ಲಿ ಇರಿಸಿದ್ದ 13 ಪವನ್ ತೂಕದ ಚಿನ್ನದ ನೆಕ್ಲೆಸ್, ಒಂದು ಪವನ್ ತೂಕದ ಎರಡು ಚಿನ್ನದ ಚೈನ್, ತಲಾ ಒಂದು ಪವನ್ ತೂಕದ ನಾಲ್ಕು ಚಿನ್ನದ ಕಾಯಿನ್, ತಲಾ ನಾಲ್ಕು ಪವನ್ ತೂಕದ ನಾಲ್ಕು ಚಿನ್ನದ ಬಿಸ್ಕೆಟ್, ಎರಡು ಪವನ್ ತೂಕದ ಚಿನ್ನದ ಗಟ್ಟಿ ಸೇರಿದಂತೆ ವಿವಿಧ ಮಾದರಿಯ ಒಟ್ಟು 12.5 ಲಕ್ಷ ಮೌಲ್ಯದ ಚಿನ್ನಾಭರಣಗಳು ಕಳವಾಗಿದ್ದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, 5200 ರೂ. ನಗದು ಕಳವಾದ ಬಗ್ಗೆಯೂ ಮಾಹಿತಿ ನೀಡಲಾಗಿತ್ತು.



ಪ್ರಕರಣದ ಪತ್ತೆಗಾಗಿ ಬೆಳ್ತಂಗಡಿ ಇನ್ ಸ್ಪೆಕ್ಟರ್ ಶಿವಕುಮಾರ್ ಬಿ., ಪಿಎಸ್ಐ ನಂದ ಕುಮಾರ್, ಪಿಎಸ್ಐ ಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ಮೂವರನ್ನು ಬಂಧಿಸಲಾಗಿದೆ. ನಾವೂರು ಗ್ರಾಮದ ಮಹಮ್ಮದ್ ಸ್ವಾಲಿ (26), ಲಾಯ್ಲ ಗ್ರಾಮದ ಯಾಹ್ಯಾ(32), ನಾವೂರು ಗ್ರಾಮದ ಬಿ.ಎಚ್. ನೌಫಲ್ (27) ಬಂಧಿತರು. ಕೃತ್ಯಕ್ಕೆ ಉಪಯೋಗಿಸಿದ ಆಲ್ಟೋ ಕಾರು, ಪಲ್ಸರ್ ಬೈಕ್, ನಾಲ್ಕು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ಕಳವುಗೈದಿದ್ದ 12.5 ಲಕ್ಷ ಮೌಲ್ಯದ 320 ಗ್ರಾಮ್ ಚಿನ್ನಾಭರಣ, ನಗದು 1230 ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದು ಒಂದೇ ವಾರದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. ಮನೆಯಲ್ಲಿ ಚಿನ್ನ ಇಟ್ಟಿರುವ ವಿಚಾರ ತಿಳಿದಿದ್ದವರೇ ಸಂಚು ನಡೆಸಿ ಕಳವು ಕೃತ್ಯ ಎಸಗಿದ್ದರು.
320 gram of God Biscuit stolen from home three arrested by a week by Belthangady police
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm