ಕ್ಯಾಟರಿಂಗ್ ಪಿಕಪ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು

14-11-21 10:45 pm       Mangaluru Correspondent   ಕರಾವಳಿ

ಕ್ಯಾಟರಿಂಗ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಬಿಸಿ ರೋಡ್ ಬಳಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಬಂಟ್ವಾಳ, ನ.14: ಕ್ಯಾಟರಿಂಗ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಬಿಸಿ ರೋಡ್ ಬಳಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶೀತ್ (21) ಮೃತ ಯುವಕರು. ಸಿಂಚನ್ ಮತ್ತು ಸುದೀಪ್ ಎಂಬವರು ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಆಹಾರ ಸಾಗಾಟ ಮಾಡುತ್ತಿದ್ದ ಕ್ಯಾಟರಿಂಗ್ ಪಿಕಪ್ ವಾಹನ, ಬ್ರಹ್ಮರಕೂಟ್ಲು ಬಳಿಯ ರಾಮಲ್ ಕಟ್ಟೆ ಎಂಬಲ್ಲಿ ಮರಕ್ಕೆ ಡಿಕ್ಕಿಯಾಗಿದೆ. ಚಾಲಕನ ಅತಿ ವೇಗದ ಚಾಲನೆ ಮತ್ತು ಧಾವಂತದಿಂದಾಗಿ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಕೂಡಲೇ ಅವರನ್ನು ತುಂಬೆ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. 

In a tragic incident, two youths lost their lives after a vehicle smashed into a roadside tree at Ramalkatte on near Brahmarkotlu on Mangaluru-BC Road route here on Sunday November 14. The deceased have been identified as Chetan (25) and Ashith (21), both residents of Uppinangady.