ಬ್ರೇಕಿಂಗ್ ನ್ಯೂಸ್
16-11-21 01:57 pm Mangaluru Correspondent ಕರಾವಳಿ
ಮಂಗಳೂರು, ನ.16: ಲೇಡಿಗೋಷನ್ ಆಸ್ಪತ್ರೆಯ ಸಿಬಂದಿಯ ನಿರ್ಲಕ್ಷ್ಯದಿಂದ ಮಗು ಅದಲು ಬದಲಾಗಿದೆ ಎಂಬ ಆರೋಪಕ್ಕೀಡಾಗಿದ್ದ ಮಗು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.
ಕಳೆದ ಅಕ್ಟೋಬರ್ 15ರಂದು ಮಗು ಅದಲು ಬದಲಾಗಿರುವ ಬಗ್ಗೆ ಕುಂದಾಪುರದ ಕುಟುಂಬವೊಂದು ಬಂದರು ಠಾಣೆಯಲ್ಲಿ ದೂರು ದಾಖಲಿಸಿತ್ತು. ಲೇಡಿಗೋಷನ್ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವಿಗೆ ಅನಾರೋಗ್ಯ ಇತ್ತೆಂದು 17 ದಿನ ಆಸ್ಪತ್ರೆಯಲ್ಲಿ ದಾಖಲಾಗಿ, ಹುಷಾರಾಗಲಿಲ್ಲ ಎಂದು ಡಿಸ್ಚಾರ್ಜ್ ಮಾಡಿ ಬ್ರಹ್ಮಾವರಕ್ಕೆ ಒಯ್ದಿದ್ದರು. ಅಲ್ಲಿ ನೋಡಿದರೆ, ಹೆಣ್ಣು ಎಂದು ಹೇಳಿದ್ದ ಮಗು ಗಂಡು ಆಗಿತ್ತು. ಅಲ್ಲದೆ, ಮಗುವಿನ ಮಲದ್ವಾರ ಇಲ್ಲದೇ ಇದ್ದು ಪ್ರಬಲ ಸಮಸ್ಯೆಯಿಂದ ಬಳಲುತ್ತಿತ್ತು.

ತಮಗೆ ಹೆಣ್ಣು ಮಗುವೆಂದು ತಿಳಿಸಿದ್ದಲ್ಲದೆ, ಗಂಭೀರ ಸಮಸ್ಯೆ ಇದ್ದ ಬಗ್ಗೆ ಆಸ್ಪತ್ರೆ ಸಿಬಂದಿ ತಿಳಿಸಿರಲಿಲ್ಲ ಎಂಬ ಆರೋಪ ಮಗುವಿನ ಪೋಷಕರದ್ದಾಗಿತ್ತು. ಗಂಡು ಮಗುವನ್ನು ನೀಡಿದ್ದು, ಇದರ ಹಿಂದೆ ಏನೋ ಮಸಲತ್ತು ನಡೆದಿದೆ ಎಂದು ಮಗುವಿನ ತಂದೆ ಬಂದರು ಠಾಣೆಗೆ ದೂರು ನೀಡಿದ್ದರು. ಆನಂತರ, ಮಗುವನ್ನು ಮರಳಿ ಲೇಡಿಗೋಷನ್ ಆಸ್ಪತ್ರೆಗೆ ತಂದು ದಾಖಲು ಮಾಡಲಾಗಿತ್ತು. ಹಿಂದಿನಂತೇ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಈ ನಡುವೆ, ಕುಟುಂಬಸ್ಥರು ಮಗು ಮತ್ತು ಪೋಷಕರ ಡಿಎನ್ಎ ಟೆಸ್ಟ್ ಮಾಡಬೇಕೆಂದು ಕೋರ್ಟ್ ಮೊರೆ ಹೋಗಿದ್ದರು.
ಕೋರ್ಟ್ ಆದೇಶದಂತೆ ಮಗುವಿಗೆ ಒಂದು ತಿಂಗಳು ಆಗುತ್ತಿದ್ದಂತೆ ಡಿಎನ್ಎ ಟೆಸ್ಟ್ ಕೂಡ ಮಾಡಲಾಗಿತ್ತು. ಅದರ ವರದಿ ಹೈದರಾಬಾದ್ ಪ್ರಯೋಗಾಲಯಕ್ಕೆ ಹೋಗಿದ್ದು, ವರದಿ ಇನ್ನೂ ಬಂದಿಲ್ಲ. ಈ ನಡುವೆ, ನ.15ರಂದು ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಹೆತ್ತವರ ಜಗಳದಲ್ಲಿ ಕೂಸು ಬಡವಾಯ್ತು ಅನ್ನುವಂತೆ, ತಮ್ಮ ಮಗು ಅಲ್ಲವೆಂದು ಹೆತ್ತವರು ಒಂದೆಡೆ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಇನ್ನೊಂದು ಕಡೆ ನಿರ್ಲಕ್ಷ್ಯವೂ ಎದುರಾಗಿತ್ತು. ಇದರ ಪರಿಣಾಮವೋ ಏನೋ, ಮಗು ಈಗ ಸಾವು ಕಂಡಿದೆ.
ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಬದಲು ಪ್ರಕರಣ ; ಪೋಷಕರ ಡಿಎನ್ಎ ಪರೀಕ್ಷೆಗೆ ಕೋರ್ಟ್ ಅನುಮತಿ
Mangalore Family alleges exchange of baby at Lady Goschen Hospital, the baby dies after unsuccessful treatment . A family from Kundapur had alleged bungling by the doctors of Lady Goschen Hospital here. The parents claim that the hospital had issued records during the delivery, confirming that the newborn was female. However, after 18 days, when the child was taken to another hospital for advanced treatment, they came to know that their baby was male. This has given rise to a sense of indignation and suspicion in them.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm