ಬ್ರೇಕಿಂಗ್ ನ್ಯೂಸ್
16-11-21 10:03 pm Mangaluru Correspondent ಕರಾವಳಿ
ಉಳ್ಳಾಲ, ನ.16: ಕುಂಪಲ, ಪಿಲಾರು ಪ್ರದೇಶದಲ್ಲಿ ಮರಿ ಚಿರತೆಯನ್ನು ಮೂವರು ಪ್ರತ್ಯಕ್ಷವಾಗಿ ಕಂಡಿದ್ದ ಹಿನ್ನೆಲೆಯಲ್ಲಿ ಕಾರ್ಯಪೃವೃತ್ತರಾದ ಅರಣ್ಯ ಇಲಾಖಾಧಿಕಾರಿಗಳು ಇಂದು ಸರಳಾಯ ಕಾಲನಿಯಲ್ಲಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆಗೆ ಇಳಿದಿದ್ದಾರೆ.
ಕಳೆದ ಶನಿವಾರ ಸಂಜೆ ಗುತ್ತಿಗೆದಾರ ಜಯಂತ್ ಕೊಂಡಾಣ ಎಂಬವರು ಸ್ಕೂಟರಲ್ಲಿ ಸರಳಾಯ ಕಾಲನಿ ರಸ್ತೆಯಲ್ಲಿ ತೆರಳುತ್ತಿದ್ದಾಗ ಮರಿ ಚಿರತೆಯೊಂದು ಪೊದೆಯಿಂದ ನೆಗೆದು ರಸ್ತೆ ದಾಟಿತ್ತೆನ್ನಲಾಗಿದೆ. ಇದಕ್ಕೂ ಹತ್ತು ದಿವಸಗಳ ಹಿಂದೆ ಪಿಲಾರು ಪಳ್ಳ ನಿವಾಸಿ ಶಿವರಾಜ್ ಪೊಣ್ಣು ಸ್ವಾಮಿ ಮತ್ತು ಸರಳಾಯ ಕಾಲನಿ ನಿವಾಸಿ ಮೌರಿಷ್ ಡಿಸೋಜ ಅವರು ಮರಿ ಚಿರತೆಯನ್ನ ಕಣ್ಣಾರೆ ಕಂಡಿದ್ದಾಗಿ ಹೇಳಿದ್ದರು. ಮೌರಿಷ್ ಡಿಸೋಜ ಅವರು ಬೆಳಗ್ಗೆ ತೋಟದ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಚಿರತೆ ಮರಿಯು ಡಿಸೋಜರನ್ನ ದಿಟ್ಟಿಸಿ ಬುಸುಗುಟ್ಟಿ ಓಡಿತ್ತೆನ್ನಲಾಗಿದೆ. ಪ್ರತ್ಯಕ್ಷದರ್ಶಿ ಹೇಳಿಕೆಗಳನ್ನ ಗಂಭೀರವಾಗಿ ಪರಿಗಣಿಸಿದ್ದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ನೇತೃತ್ವದ ತಂಡ ಚಿರತೆ ಕಾಣಿಸಿಕೊಂಡ ಪ್ರದೇಶಗಳಿಗೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಇಂದು ಅರಣ್ಯಾಧಿಕಾರಿಗಳು ಮರಿ ಚಿರತೆಯನ್ನು ಸೆರೆ ಹಿಡಿಯಲು ಸರಳಾಯ ಕಾಲನಿಯ ಪೊದೆಗಳ ಪ್ರದೇಶದಲ್ಲಿ ಬೋನನ್ನು ಇಟ್ಟಿದ್ದಾರೆ.



ಪ್ರದೇಶದಲ್ಲಿ ಚಿರತೆ ಇರುವಿಕೆಯ ಬಗ್ಗೆ ಪ್ರತ್ಯಕ್ಷ ದರ್ಶಿಗಳು ಹೇಳಿರುವುದರ ಹಿನ್ನೆಲೆಯಲ್ಲಿ ಬೋನನ್ನು ಇಟ್ಟು ಕಾರ್ಯಾಚರಣೆ ಶುರು ಮಾಡಿದ್ದೇವೆ. ಸ್ಥಳೀಯರು ಆದಷ್ಟು ಜಾಗರೂಕರಾಗಿರುವಂತೆ ಅರಣ್ಯಾಧಿಕಾರಿ ಮಹಾಬಲ ಅವರು ಜನರಿಗೆ ಸೂಚನೆ ನೀಡಿದ್ದಾರೆ.
ಸ್ಥಳೀಯ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ, ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ ಅವರು ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಿದ್ದಾರೆ. ಬೋನನ್ನ ತರುವಲ್ಲಿ ಸ್ಥಳೀಯರಾದ ಕಿಶೋರ್ ಕುಂಪಲ, ನಾಗೇಶ್ ಕುಂಪಲ, ಅಭಿಜಿನ್, ತರುಣ್ ಅವರು ಇಲಾಖಾಧಿಕಾರಿಗಳಿಗೆ ಸಹಕರಿಸಿದ್ದಾರೆ. ಅರಣ್ಯ ರಕ್ಷಕಿ ಸೌಮ್ಯ ಕೆ. ಜೊತೆಗಿದ್ದರು.
ಕುಂಪಲ, ಪಿಲಾರು ಪ್ರದೇಶದಲ್ಲಿ ಚಿರತೆ ಗುಮ್ಮ ; ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಚಿರತೆ ಬಗ್ಗೆ ಸಿಗದ ಸುಳಿವು
ಕುಂಪಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ! ಅರಣ್ಯ ಅಧಿಕಾರಿಗಳ ದೌಡು, ಆಪರೇಷನ್ ಚೀತಾ ಕಾರ್ಯಾಚರಣೆಗೆ ಸಿದ್ಧತೆ
Mangalore Cheetah in Kumpala near Pillar Forest officials wait for catch with bone.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm