ಬ್ರೇಕಿಂಗ್ ನ್ಯೂಸ್
16-11-21 10:03 pm Mangaluru Correspondent ಕರಾವಳಿ
ಉಳ್ಳಾಲ, ನ.16: ಕುಂಪಲ, ಪಿಲಾರು ಪ್ರದೇಶದಲ್ಲಿ ಮರಿ ಚಿರತೆಯನ್ನು ಮೂವರು ಪ್ರತ್ಯಕ್ಷವಾಗಿ ಕಂಡಿದ್ದ ಹಿನ್ನೆಲೆಯಲ್ಲಿ ಕಾರ್ಯಪೃವೃತ್ತರಾದ ಅರಣ್ಯ ಇಲಾಖಾಧಿಕಾರಿಗಳು ಇಂದು ಸರಳಾಯ ಕಾಲನಿಯಲ್ಲಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆಗೆ ಇಳಿದಿದ್ದಾರೆ.
ಕಳೆದ ಶನಿವಾರ ಸಂಜೆ ಗುತ್ತಿಗೆದಾರ ಜಯಂತ್ ಕೊಂಡಾಣ ಎಂಬವರು ಸ್ಕೂಟರಲ್ಲಿ ಸರಳಾಯ ಕಾಲನಿ ರಸ್ತೆಯಲ್ಲಿ ತೆರಳುತ್ತಿದ್ದಾಗ ಮರಿ ಚಿರತೆಯೊಂದು ಪೊದೆಯಿಂದ ನೆಗೆದು ರಸ್ತೆ ದಾಟಿತ್ತೆನ್ನಲಾಗಿದೆ. ಇದಕ್ಕೂ ಹತ್ತು ದಿವಸಗಳ ಹಿಂದೆ ಪಿಲಾರು ಪಳ್ಳ ನಿವಾಸಿ ಶಿವರಾಜ್ ಪೊಣ್ಣು ಸ್ವಾಮಿ ಮತ್ತು ಸರಳಾಯ ಕಾಲನಿ ನಿವಾಸಿ ಮೌರಿಷ್ ಡಿಸೋಜ ಅವರು ಮರಿ ಚಿರತೆಯನ್ನ ಕಣ್ಣಾರೆ ಕಂಡಿದ್ದಾಗಿ ಹೇಳಿದ್ದರು. ಮೌರಿಷ್ ಡಿಸೋಜ ಅವರು ಬೆಳಗ್ಗೆ ತೋಟದ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಚಿರತೆ ಮರಿಯು ಡಿಸೋಜರನ್ನ ದಿಟ್ಟಿಸಿ ಬುಸುಗುಟ್ಟಿ ಓಡಿತ್ತೆನ್ನಲಾಗಿದೆ. ಪ್ರತ್ಯಕ್ಷದರ್ಶಿ ಹೇಳಿಕೆಗಳನ್ನ ಗಂಭೀರವಾಗಿ ಪರಿಗಣಿಸಿದ್ದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ನೇತೃತ್ವದ ತಂಡ ಚಿರತೆ ಕಾಣಿಸಿಕೊಂಡ ಪ್ರದೇಶಗಳಿಗೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಇಂದು ಅರಣ್ಯಾಧಿಕಾರಿಗಳು ಮರಿ ಚಿರತೆಯನ್ನು ಸೆರೆ ಹಿಡಿಯಲು ಸರಳಾಯ ಕಾಲನಿಯ ಪೊದೆಗಳ ಪ್ರದೇಶದಲ್ಲಿ ಬೋನನ್ನು ಇಟ್ಟಿದ್ದಾರೆ.



ಪ್ರದೇಶದಲ್ಲಿ ಚಿರತೆ ಇರುವಿಕೆಯ ಬಗ್ಗೆ ಪ್ರತ್ಯಕ್ಷ ದರ್ಶಿಗಳು ಹೇಳಿರುವುದರ ಹಿನ್ನೆಲೆಯಲ್ಲಿ ಬೋನನ್ನು ಇಟ್ಟು ಕಾರ್ಯಾಚರಣೆ ಶುರು ಮಾಡಿದ್ದೇವೆ. ಸ್ಥಳೀಯರು ಆದಷ್ಟು ಜಾಗರೂಕರಾಗಿರುವಂತೆ ಅರಣ್ಯಾಧಿಕಾರಿ ಮಹಾಬಲ ಅವರು ಜನರಿಗೆ ಸೂಚನೆ ನೀಡಿದ್ದಾರೆ.
ಸ್ಥಳೀಯ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ, ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ ಅವರು ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಿದ್ದಾರೆ. ಬೋನನ್ನ ತರುವಲ್ಲಿ ಸ್ಥಳೀಯರಾದ ಕಿಶೋರ್ ಕುಂಪಲ, ನಾಗೇಶ್ ಕುಂಪಲ, ಅಭಿಜಿನ್, ತರುಣ್ ಅವರು ಇಲಾಖಾಧಿಕಾರಿಗಳಿಗೆ ಸಹಕರಿಸಿದ್ದಾರೆ. ಅರಣ್ಯ ರಕ್ಷಕಿ ಸೌಮ್ಯ ಕೆ. ಜೊತೆಗಿದ್ದರು.
ಕುಂಪಲ, ಪಿಲಾರು ಪ್ರದೇಶದಲ್ಲಿ ಚಿರತೆ ಗುಮ್ಮ ; ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಚಿರತೆ ಬಗ್ಗೆ ಸಿಗದ ಸುಳಿವು
ಕುಂಪಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ! ಅರಣ್ಯ ಅಧಿಕಾರಿಗಳ ದೌಡು, ಆಪರೇಷನ್ ಚೀತಾ ಕಾರ್ಯಾಚರಣೆಗೆ ಸಿದ್ಧತೆ
Mangalore Cheetah in Kumpala near Pillar Forest officials wait for catch with bone.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm