ಸಚಿವ ಸೋಮಶೇಖರ್ ಎಚ್ಚರಿಕೆಗೆ ಬೆದರಿದ ಸಹಕಾರಿ ರಾಜೇಂದ್ರ ; ಪರಿಷತ್ ಸ್ಪರ್ಧಾ ಕಣದಿಂದಲೇ ಹಿಂದೆ ಸರಿಯಲು ನಿರ್ಧಾರ ! ತೀವ್ರ ಮುಖಭಂಗ

20-11-21 01:49 pm       Mangaluru Correspondent   ಕರಾವಳಿ

ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸಹಕಾರಿ ಧುರೀಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ದಿಢೀರ್ ಆಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ಮಂಗಳೂರು, ನ.20: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸಹಕಾರಿ ಧುರೀಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ದಿಢೀರ್ ಆಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ನಿನ್ನೆಯಷ್ಟೇ ಸಹಕಾರಿ ಸಚಿವ ಸೋಮಶೇಖರ್, ಡಿಸಿಸಿ ಬ್ಯಾಂಕಿನ ಅಕ್ರಮದ ಬಗ್ಗೆ ಹೇಳಿಕೆ ನೀಡಿದ್ದರು. ರಾಜೇಂದ್ರ ಕುಮಾರ್ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ರಾಜೇಂದ್ರ ಕುಮಾರ್ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ರಾಜೇಂದ್ರ ಕುಮಾರ್, ಸಹಕಾರಿ ಕ್ಷೇತ್ರ ರಾಜಕೀಯ ಮುಕ್ತ ಆಗಿರಬೇಕು ಎನ್ನುವ ನೆಲೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ. ರಾಜಕೀಯ ಪಕ್ಷದಿಂದಲೇ ಸ್ಪರ್ಧಿಸಬೇಕೆಂಬ ಒತ್ತಡ ಬಂದಿತ್ತು. ಆದರೆ ಯಾವುದೇ ರಾಜಕೀಯ ಪಕ್ಷದಲ್ಲಿ ಸ್ಪರ್ಧಿಸಲು ನಾನು ಬಯಸಿಲ್ಲ. ಹಾಗಾಗಿ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದಾರೆ. ‌

ಎರಡು ದಿನಗಳ ಹಿಂದೆ ನಗರದಲ್ಲಿ ಚುನಾವಣಾ ಕಚೇರಿ ಉದ್ಘಾಟಿಸಿ, ವಿಧಾನ ಪರಿಷತ್ ಚುನಾವಣೆಗೆ ಕಣಕ್ಕಿಳಿಯುವ ಬಗ್ಗೆ ಘೋಷಣೆ ಮಾಡಿದ್ದ ರಾಜೇಂದ್ರ ಕುಮಾರ್ ಇದೀಗ ಸ್ಪರ್ಧೆಯಿಂದಲೇ ಹಿಂಜರಿಯುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಎರಡು ದಿನಗಳಿಂದ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯಲು ತೀವ್ರ ಕಸರತ್ತು ನಡೆಸಿದ್ದ ರಾಜೇಂದ್ರ ಕುಮಾರ್ ಗೆ ಟಿಕೆಟ್ ಸಿಗಲ್ಲ ಎನ್ನುವುದು ಖಾತ್ರಿಯಾಗುತ್ತಲೇ ಹಿಂದಕ್ಕೆ ಸರಿದಿದ್ದಾರೆ.

ಸಹಕಾರಿ ರಾಜೇಂದ್ರ ವಿರುದ್ಧ ಗುಡುಗಿದ ಸಚಿವ ಸೋಮಶೇಖರ್ ; ಡಿಸಿಸಿ ಬ್ಯಾಂಕಿನಲ್ಲಿ ಅಕ್ರಮ, ನವೋದಯ ಹೆಸರಲ್ಲಿ ಹಣ ದುರುಪಯೋಗ !!

Mangalore SCDCC Rajendra Kumar backs out from contesting MLC elections. Cooperative leader and SCDCC Bank chairman M N Rajendra Kumar had planned to contest from Congress in the MLC poll to be held in December, who presently had decided to contest as an Independent candidate. Couple of days ago a delegation had already met KPCC president D K Shivakumar.