ಬ್ರೇಕಿಂಗ್ ನ್ಯೂಸ್
20-11-21 03:43 pm Mangaluru correspondent ಕರಾವಳಿ
ಮಂಗಳೂರು, ನ.20: ಕಳೆದ ಎರಡು ದಿನಗಳಿಂದ ವೈರಲ್ ಆಗಿದ್ದ ಹಿಂದು ಯುವತಿ ಮತ್ತು ಮುಸ್ಲಿಂ ಯುವಕನ ಮದುವೆ ವಿಚಾರದಲ್ಲಿ ಹಿಂದು ಸಂಘಟನೆಗಳ ನಾಯಕರು ಎಂಟ್ರಿ ಆಗಿದ್ದಾರೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಿಂದು ಸಂಘಟನೆಗಳ ನಾಯಕರು ಮದುವೆಗೆ ರೆಡಿಯಾಗಿದ್ದ ಯುವತಿಯ ಮನೆಗೆ ತೆರಳಿ, ಮನವೊಲಿಕೆ ಮಾಡಿದ್ದಾರೆ.
ಪಾಂಡೇಶ್ವರದ ಮನೆಗೆ ತೆರಳಿದ ಸ್ವಾಮೀಜಿ, ಯುವತಿ ಮತ್ತು ಆಕೆಯ ಹೆತ್ತವರಲ್ಲಿ ಮಾತನಾಡಿದ್ದಾರೆ. ಇತ್ತೀಚಿನ ಆಸಿಯಾ ಪ್ರಕರಣ ಸೇರಿದಂತೆ ಹತ್ತಾರು ಪ್ರಕರಣದಲ್ಲಿ ಹಿಂದು ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ, ಮತಾಂತರ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆಸಿಯಾ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ತನ್ನ ಗಂಡ ಇಬ್ರಾಹಿಂ ಮನೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ, ಆಕೆಗೆ ಯಾವುದೇ ಕಡೆಯಿಂದ ನ್ಯಾಯ ಸಿಗದ ವಿಚಾರವನ್ನು ತಿಳಿಹೇಳಿದ್ದಾರೆ.

ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದ ಸಂದರ್ಭದಲ್ಲಿ ಯುವಕ- ಯುವತಿಯ ಪರಿಚಯ ಪ್ರೀತಿಗೆ ತಿರುಗಿತ್ತು. ಅದರಂತೆ, ಹಿಂದು ಯುವತಿಯನ್ನು ಕೇರಳದ ಕಣ್ಣೂರು ಜಿಲ್ಲೆಯ ನಿವಾಸಿ ಜಫರ್ ಎಂಬಾತ ಮದುವೆಯಾಗಲು ತಯಾರಿ ನಡೆದಿತ್ತು. ನ.29ರಂದು ಕಣ್ಣೂರಿನ ಬೀಚ್ ರೆಸಾರ್ಟ್ ಒಂದರಲ್ಲಿ ಮದುವೆ ರಿಸೆಪ್ಶನ್ ನಡೆಯುವ ಬಗ್ಗೆ ಆಮಂತ್ರಣ ಪತ್ರ ವೈರಲ್ ಆಗಿತ್ತು. ಯುವತಿಯ ಹೆತ್ತವರು ಮತ್ತು ಯುವಕನ ಜೊತೆಗಿದ್ದ ಆಕೆಯ ಫೋಟೋ ಕೂಡ ವೈರಲ್ ಆಗಿದ್ದು ಹಿಂದು ಸಂಘಟನೆ ಕಾರ್ಯಕರ್ತರಿಂದ ಆಕ್ರೋಶವೂ ಕೇಳಿಬಂದಿತ್ತು.

ಇದರ ಬೆನ್ನಲ್ಲೇ, ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಸಂಘಟನೆಯ ನಾಯಕರು ವಜ್ರದೇಹಿ ಸ್ವಾಮೀಜಿ ನೇತೃತ್ವದಲ್ಲಿ ಯುವತಿ ಮನೆಗೆ ಭೇಟಿ ನೀಡಿದ್ದು, ಈ ರೀತಿಯ ಮದುವೆಗಳಿಂದ ಆಗಿರುವ ಅಪಾಯ ಮತ್ತು ಮುಸ್ಲಿಮರ ಲವ್ ಜಿಹಾದ್ ಕೃತ್ಯಗಳ ಬಗ್ಗೆ ಅರಿವು ಮೂಡಿಸಿದ್ದಾರೆ. ಯುವತಿ ಮನೆಯವರು ವಜ್ರದೇಹಿ ಸ್ವಾಮೀಜಿಗಳ ಮಾತಿಗೆ ಒಪ್ಪಿದ್ದು, ಸದ್ಯಕ್ಕೆ ಮದುವೆಯನ್ನು ಮುಂದೂಡಲು ನಿರ್ಧರಿಸಿದ್ದಾರೆ.
ವಜ್ರದೇಹಿ ಸ್ವಾಮೀಜಿ ಜೊತೆಗೆ ವಿಎಚ್ ಪಿ ನಾಯಕರಾದ ಶರಣ್ ಪಂಪ್ವೆಲ್, ಭುಜಂಗ ಕುಲಾಲ್, ಶಿವಾನಂದ ಮೆಂಡನ್ ಸೇರಿದಂತೆ ಯುವತಿಯ ಹತ್ತಿರದ ಸಂಬಂಧಿಕರು ಇದ್ದರು. ಯುವತಿಯ ತಂದೆ ಪಾಂಡೇಶ್ವರದಲ್ಲಿ ಬೇಕರಿ ಹೊಂದಿದ್ದು, ಸ್ಥಳೀಯವಾಗಿ ಉತ್ತಮ ಹೆಸರು ಹೊಂದಿದ್ದಾರೆ.
Hindu girl to marry Muslim boy in Mangalore, VHP and Bajarang Dal members visit girls house To convince her not to marry Muslim guy.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm