ಬ್ರೇಕಿಂಗ್ ನ್ಯೂಸ್
21-11-21 07:22 pm Mangaluru Correspondent ಕರಾವಳಿ
ಬಂಟ್ವಾಳ, ನ.21: ಮಣ್ಣಿನಲ್ಲಿ ಹುಟ್ಟಿ ಮಣ್ಣಿನಲ್ಲೇ ಬೆಳೆದ ರೈತರ ಕಷ್ಟ ಐಎಎಸ್ ಅಧಿಕಾರಿಗಳಿಗೆ ಗೊತ್ತಿಲ್ಲ. ಕೊಟ್ಟ ದೂರಿಗೆ ಕ್ರಮವಿಲ್ಲ, ಕೇಳಿದ ಮಾಹಿತಿಗೆ ಉತ್ತರವಿಲ್ಲದೆ ಜನರನ್ನು ಭಯದಲ್ಲಿ ಬದುಕುವಂತೆ ಅಧಿಕಾರಿಗಳು ಮಾಡುತ್ತಿದ್ದಾರೆ. ನಮ್ಮ ಹೋರಾಟವನ್ನು ಹಗುರವಾಗಿ ತೆಗೆದುಕೊಳ್ಳದೆ ಅಧಿಕಾರಿ ವರ್ಗ ಒಗ್ಗಟ್ಟಿನಿಂದ ಬೆಂಬಲ ಸೂಚಿಸಬೇಕು ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ರಾಜೀವ ಗೌಡ ಹೇಳಿದರು.
ವಿಟ್ಲದ ಮಂಗಳಪದವು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ವಿಟ್ಲ ರೈತ ಹೋರಾಟ ಸಮಿತಿ ಉಡುಪಿ - ಕಾಸರಗೋಡು 400 ಕೆ.ವಿ. ವಿದ್ಯುತ್ ಮಾರ್ಗದಿಂದ ಸಂತ್ರಸ್ತರಾಗುವ ರೈತರ ಸಭೆಯಲ್ಲಿ ಅವರು ಮಾತನಾಡಿದರು.
ಪುತ್ತೂರಿನಲ್ಲಿ ರೈತ ಮಾರುಕಟ್ಟೆಯನ್ನು ಹಾಳು ಮಾಡಿದ ಅಧಿಕಾರಿ ವರ್ಗ ರೈತರ ಜಮೀನು ಉಳಿಸಲು ಸಾಧ್ಯವೇ ಎಂದು ಪ್ರಶ್ನಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಜನರು ಸೋತಾಗ ಯಾವ ರಾಜಕೀಯ ಪಕ್ಷದವರೂ ಹತ್ತಿರಕ್ಕೆ ಬರುವುದಿಲ್ಲ. ವಿಟ್ಲ ಪೇಟೆಯಿಂದ ಮೆರವಣಿಗೆ ಮೂಲಕ ನಾಡ ಕಚೇರಿ ಚಲೋ ಕಾರ್ಯಕ್ರಮವನ್ನು ತಕ್ಷಣಕ್ಕೆ ಹಮ್ಮಿಕೊಂಡಿದ್ದು, ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವ ತನಕ ಉಪ ತಹಸೀಲ್ದಾರ್ ಕಚೇರಿ ಮುಂದೆ ಧರಣಿ ಕೂರಲಾಗುವುದು ಎಂದು ಹೇಳಿದರು.
ಮಾಹಿತಿ ಹಕ್ಕು ಕಾರ್ಯಕರ್ತ ಸಂಜೀವ ಕಬಕ ಮಾತನಾಡಿ ಆಕ್ಷೇಪ ಅರ್ಜಿಗಳ ಪರಿಸ್ಥಿತಿ ಏನಾಗಿದೆ ಎಂಬಲ್ಲಿಂದ ಹಿಡಿದು ಪ್ರತಿ ಹಂತದಲ್ಲಿ ಯೋಜನೆಯ ಮಾಹಿತಿ ಪಡೆಯುವ ಕಾರ್ಯ ಬೆನ್ನು ಬಿಡದೆ ಮಾಡಬೇಕು. ಅಂತಿಮ ಹಂತದಲ್ಲಿ ಕಾನೂನು ಹೋರಾಟಕ್ಕೆ ಹೋದಾಗ ದಾಖಲೆಗಳ ಅಗತ್ಯ ಇದೆ. ರೈತರನ್ನು ಕತ್ತಲೆಯಲ್ಲಿ ಇಟ್ಟು ಮಾಡುವ ಕಾರ್ಯಕ್ಕೆ ಭವಿಷ್ಯದಲ್ಲಿ ಪ್ರತಿಯೊಬ್ಬರೂ ಬೆಲೆ ತೆರಬೇಕಾಗುತ್ತದೆ ಎಂದರು.
ಲೋಕನಾಥ ಶೆಟ್ಟಿ ಕೊಲ್ಯ, ಕೃಷ್ಣಪ್ರಸಾದ್, ಸುಭಾಷ್ ರೈ ಹೋರಾಟದ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು, ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು, ಬಂಟ್ವಾಳ ಕಾರ್ಯದರ್ಶಿ ಸುದೇಶ್ ಮಯ್ಯ, ವಿಟ್ಲ ರೈತ ಹೋರಾಟ ಸಮಿತಿ ಉಪಾಧ್ಯಕ್ಷ ವಿಷ್ಣು ಭಟ್ ಆಲಂಗಾರು, ಕಾರ್ಯದರ್ಶಿ ಲಕ್ಷ್ಮೀನಾರಾಯಣ ಮತ್ತಿತರರು ಉಪಸ್ಥಿತರಿದ್ದರು. ಸಂತ್ರಸ್ತ ರೈತ ಚಿತ್ತರಂಜನ್ ಪ್ರಸ್ತಾಪನೆಗೈದರು. ವಿಟ್ಲ ರೈತ ಹೋರಾಟ ಸಮಿತಿ ಕಾರ್ಯದರ್ಶಿ ರೋಹಿತಾಶ್ವ ಕಾರ್ಯಕ್ರಮ ನಿರೂಪಿಸಿದರು.
IAS officers don't know the struggle of Farmers allege Farmers in Meeting at Vitla in Mangalore
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm