ಬ್ರೇಕಿಂಗ್ ನ್ಯೂಸ್
22-11-21 12:10 pm Udupi Correspondent ಕರಾವಳಿ
ಉಡುಪಿ, ನ.22: ಕೃಷಿ ಕಾಯ್ದೆ ಒಳ್ಳೆಯದೇ ಇತ್ತು. ವಿಪಕ್ಷಗಳು ವಿರೋಧಕ್ಕಾಗಿ ವಿರೋಧ ಮಾಡಿದ್ದರಿಂದ ಸಮಸ್ಯೆ ಆಯ್ತು. ಹಾಗಂತ, ಮೋದಿ ಇದನ್ನು ಹಾಗೇ ಬಿಡೋದಿಲ್ಲ. ಮುಂದಕ್ಕೆ ಅದನ್ನು ಕಾರ್ಯರೂಪಕ್ಕೆ ತಂದೇ ತರಲಿದ್ದಾರೆ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿ ಕಾಯ್ದೆಯ ಒಳ್ಳೆಯ ಅಂಶಗಳನ್ನು ಜನರಿಗೆ ತಲುಪಿಸಲು ಆಗಲಿಲ್ಲ. ಹಾಗಾಗಿ ಹಿಂದಕ್ಕೆ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಉತ್ತಮ ನಿರ್ಧಾರ. ಎರಡು ಮಾತಿಲ್ಲ ಎಂದು ಹೇಳಿದರು.
ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸುತ್ತಿದ್ದವರು ಈ ಬಗ್ಗೆ ಚರ್ಚೆ ನಡೆಸುವುದಕ್ಕೂ ಸಿದ್ಧರಿರಲಿಲ್ಲ. ಕುಳಿತುಕೊಳ್ಳದೆ ಚರ್ಚೆ ಆಗುತ್ತದೆಯೇ.. ಚರ್ಚೆ ಆದಾಗ ಆ ಕಡೆಯಿಂದ ಮತ್ತು ಈ ಕಡೆಯಿಂದ ಉತ್ತಮ ವಿಚಾರಗಳನ್ನು ಪಡೆದುಕೊಳ್ಳಲು ಅವಕಾಶ ಇರುತ್ತದೆ. ಮೋದಿಯವರು ತಿದ್ದುಪಡಿ ಮಾಡುವುದಕ್ಕೆ ಒಪ್ಪಿಕೊಂಡಿದ್ದರು. ಆದರೆ ಇವರು ಯಾವುದಕ್ಕೂ ಒಪ್ಪಲಿಲ್ಲ.
ಹಿಂದೆ ಸಿಎಎ ವಿಚಾರದಲ್ಲಿಯೂ ಇದೇ ಆಗಿತ್ತು. ಚರ್ಚೆಗೆ ಕರೆದರೆ, ಅದನ್ನು ಮಾಡಲು ವಿಪಕ್ಷಗಳು ತಯಾರಿಲ್ಲ. ಭಾರತದಲ್ಲಿ ವ್ಯವಸ್ಥೆ ಹೀಗೆ ಆಗಿರೋದಕ್ಕೆ ಇದೂ ಕಾರಣ. ಮೋದಿ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ ಅಂದರೆ ಎರಡು ಹೆಜ್ಜೆ ಮುಂದಿಟ್ಟಿದ್ದಾರೆ ಎಂದೇ ಅರ್ಥ. ಮುಂದಕ್ಕೆ ಬೇರೆ ರೂಪದಲ್ಲಿ ಈ ಕಾಯ್ದೆ ಜಾರಿಗೆ ಬರಲಿದೆ. ಈ ರೀತಿಯ ನಡೆಯಿಂದಾಗಿ ನೈಜ ರೈತರಿಗೆ, ಸಣ್ಣ ಹಿಡುವಳಿದಾರರಿಗೆ ನಷ್ಟವಾಗಿದೆ. ಈ ವಿಚಾರ ಜನರಿಗೆ ತಲುಪುತ್ತದೆ. ತಲುಪಬೇಕು. ಅದಕ್ಕಾಗಿಯೇ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಭಾಕರ ಭಟ್ ಹೇಳಿದರು.
RSS leader Kalladka Prabhakar Bhat on Sunday November 21 reacted to the central government's decision to repeal the controversial farm laws and said that the laws will be reintroduced with minor changes.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm