ಬ್ರೇಕಿಂಗ್ ನ್ಯೂಸ್
22-11-21 12:10 pm Udupi Correspondent ಕರಾವಳಿ
ಉಡುಪಿ, ನ.22: ಕೃಷಿ ಕಾಯ್ದೆ ಒಳ್ಳೆಯದೇ ಇತ್ತು. ವಿಪಕ್ಷಗಳು ವಿರೋಧಕ್ಕಾಗಿ ವಿರೋಧ ಮಾಡಿದ್ದರಿಂದ ಸಮಸ್ಯೆ ಆಯ್ತು. ಹಾಗಂತ, ಮೋದಿ ಇದನ್ನು ಹಾಗೇ ಬಿಡೋದಿಲ್ಲ. ಮುಂದಕ್ಕೆ ಅದನ್ನು ಕಾರ್ಯರೂಪಕ್ಕೆ ತಂದೇ ತರಲಿದ್ದಾರೆ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿ ಕಾಯ್ದೆಯ ಒಳ್ಳೆಯ ಅಂಶಗಳನ್ನು ಜನರಿಗೆ ತಲುಪಿಸಲು ಆಗಲಿಲ್ಲ. ಹಾಗಾಗಿ ಹಿಂದಕ್ಕೆ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಉತ್ತಮ ನಿರ್ಧಾರ. ಎರಡು ಮಾತಿಲ್ಲ ಎಂದು ಹೇಳಿದರು.
ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸುತ್ತಿದ್ದವರು ಈ ಬಗ್ಗೆ ಚರ್ಚೆ ನಡೆಸುವುದಕ್ಕೂ ಸಿದ್ಧರಿರಲಿಲ್ಲ. ಕುಳಿತುಕೊಳ್ಳದೆ ಚರ್ಚೆ ಆಗುತ್ತದೆಯೇ.. ಚರ್ಚೆ ಆದಾಗ ಆ ಕಡೆಯಿಂದ ಮತ್ತು ಈ ಕಡೆಯಿಂದ ಉತ್ತಮ ವಿಚಾರಗಳನ್ನು ಪಡೆದುಕೊಳ್ಳಲು ಅವಕಾಶ ಇರುತ್ತದೆ. ಮೋದಿಯವರು ತಿದ್ದುಪಡಿ ಮಾಡುವುದಕ್ಕೆ ಒಪ್ಪಿಕೊಂಡಿದ್ದರು. ಆದರೆ ಇವರು ಯಾವುದಕ್ಕೂ ಒಪ್ಪಲಿಲ್ಲ.
ಹಿಂದೆ ಸಿಎಎ ವಿಚಾರದಲ್ಲಿಯೂ ಇದೇ ಆಗಿತ್ತು. ಚರ್ಚೆಗೆ ಕರೆದರೆ, ಅದನ್ನು ಮಾಡಲು ವಿಪಕ್ಷಗಳು ತಯಾರಿಲ್ಲ. ಭಾರತದಲ್ಲಿ ವ್ಯವಸ್ಥೆ ಹೀಗೆ ಆಗಿರೋದಕ್ಕೆ ಇದೂ ಕಾರಣ. ಮೋದಿ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ ಅಂದರೆ ಎರಡು ಹೆಜ್ಜೆ ಮುಂದಿಟ್ಟಿದ್ದಾರೆ ಎಂದೇ ಅರ್ಥ. ಮುಂದಕ್ಕೆ ಬೇರೆ ರೂಪದಲ್ಲಿ ಈ ಕಾಯ್ದೆ ಜಾರಿಗೆ ಬರಲಿದೆ. ಈ ರೀತಿಯ ನಡೆಯಿಂದಾಗಿ ನೈಜ ರೈತರಿಗೆ, ಸಣ್ಣ ಹಿಡುವಳಿದಾರರಿಗೆ ನಷ್ಟವಾಗಿದೆ. ಈ ವಿಚಾರ ಜನರಿಗೆ ತಲುಪುತ್ತದೆ. ತಲುಪಬೇಕು. ಅದಕ್ಕಾಗಿಯೇ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಭಾಕರ ಭಟ್ ಹೇಳಿದರು.
RSS leader Kalladka Prabhakar Bhat on Sunday November 21 reacted to the central government's decision to repeal the controversial farm laws and said that the laws will be reintroduced with minor changes.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm