ಬ್ರೇಕಿಂಗ್ ನ್ಯೂಸ್
22-11-21 03:05 pm Mangaluru correspondent ಕರಾವಳಿ
ಮಂಗಳೂರು, ನ.22: ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಉಜಿರೆ ಎಸ್ ಡಿಎಂ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಎಂ.ಪಿ. ಶ್ರೀನಾಥ್ ಆಯ್ಕೆಯಾಗಿದ್ದಾರೆ.
ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ ಘಟಕಕ್ಕೆ ಭಾನುವಾರ ಚುನಾವಣೆ ನಡೆದಿದ್ದು, ಆಯಾ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರ ಆಯ್ಕೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 44.8 ಶೇಕಡಾ ಮತದಾನ ಆಗಿತ್ತು. ಶ್ರೀನಾಥ್ ಪರವಾಗಿ 1488 ಮತಗಳು ಬಿದ್ದರೆ, ಪ್ರತಿಸ್ಪರ್ಧಿ ಮಂಗಳೂರು ಏರ್ಪೋರ್ಟ್ ಮಾಜಿ ನಿರ್ದೇಶಕ ಎಂ.ಆರ್. ವಾಸುದೇವ ಪರವಾಗಿ 534 ಮತಗಳು ಬಿದ್ದವು. ಶ್ರೀನಾಥ್ ನಿರಾಯಾಸವಾಗಿ ಗೆಲುವು ಸಾಧಿಸಿದ್ದಾರೆ.
ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ 26 ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿರುವ ಎಂ.ಪಿ.ಶ್ರೀನಾಥ್ ಈಗ ಸಹಾಯಕ ಪ್ರಾಧ್ಯಾಪಕ ಹುದ್ದೆಯಲ್ಲಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಪರ ಚಟುವಟಿಕೆ, ಕನ್ನಡ ಸಾಹಿತ್ಯ ಪರಿಷತ್ ಕೆಲಸದಲ್ಲಿ ನಿರತರಾಗಿದ್ದಾರೆ.
ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ತೀವ್ರ ಸ್ಪರ್ಧೆ ಇದ್ದ ಚುನಾವಣೆಯಲ್ಲಿ ಸುರೇಂದ್ರ ಅಡಿಗ 432 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಸುಬ್ರಹ್ಮಣ್ಯ ಬಸ್ರಿ 400 ಮತಗಳನ್ನು ಪಡೆದಿದ್ದರು.
ಮೂರು ವರ್ಷಗಳಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹುದ್ದೆಯ ಅವಧಿಯನ್ನು 5 ವರ್ಷಗಳಿಗೆ ಮಾಡಲಾಗಿದೆ. 5 ವರ್ಷ ಅವಧಿ ಆದಬಳಿಕ ಮೊದಲ ಬಾರಿಗೆ ಸಾಹಿತ್ಯ ಪರಿಷತ್ ಹುದ್ದೆಗಳಿಗೆ ಚುನಾವಣೆ ನಡೆಸಲಾಗಿದ್ದು, ರಾಜ್ಯಾದ್ಯಂತ ತೀವ್ರ ತುರುಸಿನ ಸ್ಪರ್ಧೆ ನಡೆದಿತ್ತು.
Assistant professor and noted writer, Dr M P Srinath, was elected as the president of Dakshina Kannada (DK) district Kannada Sahitya Parishad. Voting was held in ten centres across Dakshina Kannada district between 8 am and 4 pm on Sunday in which 44.8 percent members voted.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am