ಬ್ರೇಕಿಂಗ್ ನ್ಯೂಸ್
24-11-21 09:33 am HK news Desk ಕರಾವಳಿ
ಉಡುಪಿ, ನ. 24: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದಕ್ಕೆ ಬಂಪರ್ ಲಾಟರಿ ಸಿಕ್ಕಂತಾಗಿದೆ. ಅದರಲ್ಲಿದ್ದ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದ್ದು ಆ ಒಂದು ಮೀನು ಬರೋಬ್ಬರಿ ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿಗೆ ಮಾರಾಟವಾಗಿ ಮೀನುಗಾರರನ್ನೇ ಹುಬ್ಬೇರಿಸಿದೆ.
ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬವರ ಬಲರಾಮ್ ಎಂಬ ಹೆಸರಿನ ಬೋಟ್ಗೆ ಅದೃಷ್ಟ ಖುಲಾಯಿಸಿತ್ತು. ಮೀನುಗಾರರು ಬೀಸಿದ ಬಲೆಗೆ 18 ಕೆಜಿ ತೂಕದ ಅಪರೂಪದ ಗೋಳಿ ಅನ್ನುವ ಹೆಸರಿನ ಮೀನು ಲಭ್ಯವಾಗಿದ್ದು, ಈ ಮೀನು ಬರೋಬ್ಬರಿ 1,80,200 ರೂಪಾಯಿಗೆ ಮಾರಟವಾಗಿದೆ. ಮಲ್ಪೆ ಬಂದರಿನಲ್ಲಿ ಮೀನಿನ ಹರಾಜು ಪ್ರಕ್ರಿಯೆ ನಡೆದಿದ್ದು, ನೂರಾರು ಮಂದಿಯ ಕುತೂಹಲಕ್ಕೆ ಸಾಕ್ಷಿಯಾಗಿದೆ.
ಪ್ರತಿ ಕೆಜಿಗೆ 9060 ರೂ.ನಂತೆ ಗೋಳಿ ಮೀನು ಮಾರಾಟವಾಗಿದೆ. ಇದು ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಈ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗಿದ್ದು ಮೀನುಗಾರರ ಬಲೆಗೆ ಬೀಳೋದು ಅಪರೂಪ ಎನ್ನಲಾಗಿದೆ.
ಮಲ್ಪೆ ಬಂದರಿನಿಂದ ಹರಾಜಿನಲ್ಲಿ ತೆಗೆದುಕೊಂಡ ಈ ಮೀನನ್ನು ಮುಂಬೈ ಮೀನುಗಾರಿಕಾ ಬಂದರಿನಲ್ಲಿ ಮಾರಾಟ ಮಾಡಲಾಗುತ್ತದೆ. ಮುಂಬೈಯಲ್ಲಿ ಈ ಮೀನಿನ ದರ ಪ್ರತೀ ಕೆಜಿಗೆ ಹದಿನೈದು ಸಾವಿರದಿಂದ ಹದಿನೆಂಟು ಸಾವಿರದ ವರೆಗೂ ಹೋಗಲಿದೆ ಎಂದು ಮೀನುಗಾರರು ಹೇಳುತ್ತಾರೆ. ಮುಂಬೈನಿಂದ ನೇರ ಔಷಧ ಕಂಪೆನಿಗಳೇ ಈ ಮೀನನ್ನು ಖರೀದಿ ಮಾಡಲಿದ್ದು ಭಾರೀ ಬೆಲೆ ಸಿಗಲಿದೆಯಂತೆ.
ಉಡುಪಿಯ ಮಲ್ಪೆಯಲ್ಲಿ ಈ ರೀತಿಯ ಮೀನು ದೊರಕಿರೋದು ಇದೇ ಮೊದಲು. ಈ ಹಿಂದೆ ಗೋಳಿ ಜಾತಿಯ ಸಣ್ಣ ಮೀನುಗಳು ಬಲೆಗೆ ಬಿದ್ದಿದ್ದು ಪ್ರಥಮ ಬಾರಿಗೆ ಭಾರೀ ತೂಕದ ಮೀನು ಲಭ್ಯವಾಗಿದೆ. ಮಲ್ಪೆ ಬಂದರಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ದರಕ್ಕೆ ಮೀನು ಮಾರಾಟವಾಗಿದೆ.
Udupi Maple Fishermen sells fish 18 kilo fish for 1.18 lakhs. The fish was auctioned by Mumbai fishermen for 15 thousand per kilo ane later it was sold for 1.18 lakhs.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm