ಬ್ರೇಕಿಂಗ್ ನ್ಯೂಸ್
24-11-21 09:33 am HK news Desk ಕರಾವಳಿ
ಉಡುಪಿ, ನ. 24: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದಕ್ಕೆ ಬಂಪರ್ ಲಾಟರಿ ಸಿಕ್ಕಂತಾಗಿದೆ. ಅದರಲ್ಲಿದ್ದ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದ್ದು ಆ ಒಂದು ಮೀನು ಬರೋಬ್ಬರಿ ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿಗೆ ಮಾರಾಟವಾಗಿ ಮೀನುಗಾರರನ್ನೇ ಹುಬ್ಬೇರಿಸಿದೆ.
ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬವರ ಬಲರಾಮ್ ಎಂಬ ಹೆಸರಿನ ಬೋಟ್ಗೆ ಅದೃಷ್ಟ ಖುಲಾಯಿಸಿತ್ತು. ಮೀನುಗಾರರು ಬೀಸಿದ ಬಲೆಗೆ 18 ಕೆಜಿ ತೂಕದ ಅಪರೂಪದ ಗೋಳಿ ಅನ್ನುವ ಹೆಸರಿನ ಮೀನು ಲಭ್ಯವಾಗಿದ್ದು, ಈ ಮೀನು ಬರೋಬ್ಬರಿ 1,80,200 ರೂಪಾಯಿಗೆ ಮಾರಟವಾಗಿದೆ. ಮಲ್ಪೆ ಬಂದರಿನಲ್ಲಿ ಮೀನಿನ ಹರಾಜು ಪ್ರಕ್ರಿಯೆ ನಡೆದಿದ್ದು, ನೂರಾರು ಮಂದಿಯ ಕುತೂಹಲಕ್ಕೆ ಸಾಕ್ಷಿಯಾಗಿದೆ.
ಪ್ರತಿ ಕೆಜಿಗೆ 9060 ರೂ.ನಂತೆ ಗೋಳಿ ಮೀನು ಮಾರಾಟವಾಗಿದೆ. ಇದು ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಈ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗಿದ್ದು ಮೀನುಗಾರರ ಬಲೆಗೆ ಬೀಳೋದು ಅಪರೂಪ ಎನ್ನಲಾಗಿದೆ.
ಮಲ್ಪೆ ಬಂದರಿನಿಂದ ಹರಾಜಿನಲ್ಲಿ ತೆಗೆದುಕೊಂಡ ಈ ಮೀನನ್ನು ಮುಂಬೈ ಮೀನುಗಾರಿಕಾ ಬಂದರಿನಲ್ಲಿ ಮಾರಾಟ ಮಾಡಲಾಗುತ್ತದೆ. ಮುಂಬೈಯಲ್ಲಿ ಈ ಮೀನಿನ ದರ ಪ್ರತೀ ಕೆಜಿಗೆ ಹದಿನೈದು ಸಾವಿರದಿಂದ ಹದಿನೆಂಟು ಸಾವಿರದ ವರೆಗೂ ಹೋಗಲಿದೆ ಎಂದು ಮೀನುಗಾರರು ಹೇಳುತ್ತಾರೆ. ಮುಂಬೈನಿಂದ ನೇರ ಔಷಧ ಕಂಪೆನಿಗಳೇ ಈ ಮೀನನ್ನು ಖರೀದಿ ಮಾಡಲಿದ್ದು ಭಾರೀ ಬೆಲೆ ಸಿಗಲಿದೆಯಂತೆ.
ಉಡುಪಿಯ ಮಲ್ಪೆಯಲ್ಲಿ ಈ ರೀತಿಯ ಮೀನು ದೊರಕಿರೋದು ಇದೇ ಮೊದಲು. ಈ ಹಿಂದೆ ಗೋಳಿ ಜಾತಿಯ ಸಣ್ಣ ಮೀನುಗಳು ಬಲೆಗೆ ಬಿದ್ದಿದ್ದು ಪ್ರಥಮ ಬಾರಿಗೆ ಭಾರೀ ತೂಕದ ಮೀನು ಲಭ್ಯವಾಗಿದೆ. ಮಲ್ಪೆ ಬಂದರಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ದರಕ್ಕೆ ಮೀನು ಮಾರಾಟವಾಗಿದೆ.
Udupi Maple Fishermen sells fish 18 kilo fish for 1.18 lakhs. The fish was auctioned by Mumbai fishermen for 15 thousand per kilo ane later it was sold for 1.18 lakhs.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 02:47 pm
HK News Staffer
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm