ಬ್ರೇಕಿಂಗ್ ನ್ಯೂಸ್
24-11-21 10:14 am HK news Desk ಕರಾವಳಿ
ಮಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಕೆ.ಎಸ್.ಲಿಂಗೇಗೌಡ ಎಂಬ ಅಧಿಕಾರಿಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಳೆದ 30 ವರ್ಷಗಳಿಂದ ಝಂಡಾ ಹೂಡಿದ್ದ ಭ್ರಷ್ಟ ಅಧಿಕಾರಿ ಲಿಂಗೇಗೌಡ, ಮಂಗಳೂರು ಸೇರಿ ವಿವಿಧ ಕಡೆ ಅಪಾರ ಆಸ್ತಿ ಗಳಿಸಿದ್ದಾನೆಂಬ ಆರೋಪ ಕೇಳಿಬಂದಿತ್ತು. ಜೂನಿಯರ್ ಇಂಜಿನಿಯರ್ ಆಗಿ ಮಂಗಳೂರು ಪಾಲಿಕೆಯಲ್ಲಿ ಕರ್ತವ್ಯಕ್ಕೆ ಸೇರಿದ್ದ ಲಿಂಗೇಗೌಡ, ಬಳಿಕ ಎಇಇ ಆಗಿ ಶಿವಮೊಗ್ಗಕ್ಕೆ ವರ್ಗಾವಣೆ ಆಗಿದ್ದ. ಆದರೆ ಎರಡು ವರ್ಷದಲ್ಲಿ ಮತ್ತೆ ಮಂಗಳೂರು ಮಹಾನಗರ ಪಾಲಿಕೆಗೇ ಬಂದು ಸೇರಿದ್ದ ಲಿಂಗೇಗೌಡ, ಆನಂತರ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ಭಡ್ತಿ ಪಡೆದಿದ್ದ.


ಕಳೆದ ಎರಡು ವರ್ಷಗಳ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ದೊಡ್ಡ ಹುದ್ದೆ ಪಡೆದಿದ್ದ ಲಿಂಗೇಗೌಡ ನೇತೃತ್ವದಲ್ಲಿ ಸಾವಿರಾರು ಕೋಟಿ ರೂಪಾಯಿ ಯೋಜನೆಯ ಸ್ಮಾರ್ಟ್ ಸಿಟಿಯಲ್ಲಿ ಎಷ್ಟು ಅವ್ಯವಹಾರ ಆಗಿದೆಯೋ ಲೆಕ್ಕ ಇಲ್ಲ.
ಮಂಗಳೂರಿನ ಉರ್ವಾ ಮಾರ್ಕೆಟ್ ಬಳಿ ಸ್ವಂತ ಜಾಗ ಖರೀದಿಸಿ, ಹತ್ತು ವರ್ಷಗಳ ಹಿಂದೆಯೇ ಬಂಗಲೆ ಮಾದರಿ ಮನೆ ಕಟ್ಟಿಸಿದ್ದ ಲಿಂಗೇಗೌಡ ಮಂಗಳೂರು ಸೇರಿ ವಿವಿಧ ಕಡೆಗಳಲ್ಲಿ ಆಸ್ತಿ ಹೊಂದಿದ್ದಾನೆ. ಮೂಲತಃ ಹಾವೇರಿ ಜಿಲ್ಲೆಯ ಮೂಲದ ವ್ಯಕ್ತಿಯಾಗಿದ್ದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಝಂಡಾ ಹೂಡಿ ಅಪಾರ ಆಸ್ತಿ ಮಾಡಿಕೊಂಡ ಕೆಲವು ಭ್ರಷ್ಟ ಅಧಿಕಾರಿಗಳಲ್ಲಿ ಈತನೂ ಒಬ್ಬ.
ಕೆ.ಎಸ್.ಲಿಂಗೇಗೌಡ ವಿರುದ್ಧ 15 ವರ್ಷಗಳ ಹಿಂದೆಯೇ ಮಂಗಳೂರು ಲೋಕಾಯುಕ್ತದಲ್ಲಿ ಕೇಸು ದಾಖಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಈತನ ಮನೆಗೆ ದಾಳಿ ನಡೆಸಿ, ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದರು.
ಚಾಮರಾಜನಗರ, ಮೈಸೂರು, ಹಾಸನ ವಿಭಾಗದ ಎಸಿಬಿ ಅಧಿಕಾರಿಗಳು, ಇಬ್ಬರು ಡಿವೈಎಸ್ಪಿ ಸೇರಿ 25 ಕ್ಕೂ ಹೆಚ್ಚು ಮಂದಿ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾನಗರ ಪಾಲಿಕೆಯ ಕಚೇರಿ ಮತ್ತು ಉರ್ವಾ ಬಳಿಯ ಮನೆಯಲ್ಲಿ ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ.
Acb officers raid on Mangalore Smart City engineer Lingegowda residence, seize crores wealth. ACB officers have raided several places of Karnataka raiding Govt servant houses where crores of assets have been seized.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm