ಬ್ರೇಕಿಂಗ್ ನ್ಯೂಸ್
24-11-21 10:14 am HK news Desk ಕರಾವಳಿ
ಮಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಕೆ.ಎಸ್.ಲಿಂಗೇಗೌಡ ಎಂಬ ಅಧಿಕಾರಿಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಳೆದ 30 ವರ್ಷಗಳಿಂದ ಝಂಡಾ ಹೂಡಿದ್ದ ಭ್ರಷ್ಟ ಅಧಿಕಾರಿ ಲಿಂಗೇಗೌಡ, ಮಂಗಳೂರು ಸೇರಿ ವಿವಿಧ ಕಡೆ ಅಪಾರ ಆಸ್ತಿ ಗಳಿಸಿದ್ದಾನೆಂಬ ಆರೋಪ ಕೇಳಿಬಂದಿತ್ತು. ಜೂನಿಯರ್ ಇಂಜಿನಿಯರ್ ಆಗಿ ಮಂಗಳೂರು ಪಾಲಿಕೆಯಲ್ಲಿ ಕರ್ತವ್ಯಕ್ಕೆ ಸೇರಿದ್ದ ಲಿಂಗೇಗೌಡ, ಬಳಿಕ ಎಇಇ ಆಗಿ ಶಿವಮೊಗ್ಗಕ್ಕೆ ವರ್ಗಾವಣೆ ಆಗಿದ್ದ. ಆದರೆ ಎರಡು ವರ್ಷದಲ್ಲಿ ಮತ್ತೆ ಮಂಗಳೂರು ಮಹಾನಗರ ಪಾಲಿಕೆಗೇ ಬಂದು ಸೇರಿದ್ದ ಲಿಂಗೇಗೌಡ, ಆನಂತರ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ಭಡ್ತಿ ಪಡೆದಿದ್ದ.
ಕಳೆದ ಎರಡು ವರ್ಷಗಳ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ದೊಡ್ಡ ಹುದ್ದೆ ಪಡೆದಿದ್ದ ಲಿಂಗೇಗೌಡ ನೇತೃತ್ವದಲ್ಲಿ ಸಾವಿರಾರು ಕೋಟಿ ರೂಪಾಯಿ ಯೋಜನೆಯ ಸ್ಮಾರ್ಟ್ ಸಿಟಿಯಲ್ಲಿ ಎಷ್ಟು ಅವ್ಯವಹಾರ ಆಗಿದೆಯೋ ಲೆಕ್ಕ ಇಲ್ಲ.
ಮಂಗಳೂರಿನ ಉರ್ವಾ ಮಾರ್ಕೆಟ್ ಬಳಿ ಸ್ವಂತ ಜಾಗ ಖರೀದಿಸಿ, ಹತ್ತು ವರ್ಷಗಳ ಹಿಂದೆಯೇ ಬಂಗಲೆ ಮಾದರಿ ಮನೆ ಕಟ್ಟಿಸಿದ್ದ ಲಿಂಗೇಗೌಡ ಮಂಗಳೂರು ಸೇರಿ ವಿವಿಧ ಕಡೆಗಳಲ್ಲಿ ಆಸ್ತಿ ಹೊಂದಿದ್ದಾನೆ. ಮೂಲತಃ ಹಾವೇರಿ ಜಿಲ್ಲೆಯ ಮೂಲದ ವ್ಯಕ್ತಿಯಾಗಿದ್ದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಝಂಡಾ ಹೂಡಿ ಅಪಾರ ಆಸ್ತಿ ಮಾಡಿಕೊಂಡ ಕೆಲವು ಭ್ರಷ್ಟ ಅಧಿಕಾರಿಗಳಲ್ಲಿ ಈತನೂ ಒಬ್ಬ.
ಕೆ.ಎಸ್.ಲಿಂಗೇಗೌಡ ವಿರುದ್ಧ 15 ವರ್ಷಗಳ ಹಿಂದೆಯೇ ಮಂಗಳೂರು ಲೋಕಾಯುಕ್ತದಲ್ಲಿ ಕೇಸು ದಾಖಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಈತನ ಮನೆಗೆ ದಾಳಿ ನಡೆಸಿ, ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದರು.
ಚಾಮರಾಜನಗರ, ಮೈಸೂರು, ಹಾಸನ ವಿಭಾಗದ ಎಸಿಬಿ ಅಧಿಕಾರಿಗಳು, ಇಬ್ಬರು ಡಿವೈಎಸ್ಪಿ ಸೇರಿ 25 ಕ್ಕೂ ಹೆಚ್ಚು ಮಂದಿ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾನಗರ ಪಾಲಿಕೆಯ ಕಚೇರಿ ಮತ್ತು ಉರ್ವಾ ಬಳಿಯ ಮನೆಯಲ್ಲಿ ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ.
Acb officers raid on Mangalore Smart City engineer Lingegowda residence, seize crores wealth. ACB officers have raided several places of Karnataka raiding Govt servant houses where crores of assets have been seized.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm