ಬ್ರೇಕಿಂಗ್ ನ್ಯೂಸ್
24-11-21 10:14 am HK news Desk ಕರಾವಳಿ
ಮಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಕೆ.ಎಸ್.ಲಿಂಗೇಗೌಡ ಎಂಬ ಅಧಿಕಾರಿಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಳೆದ 30 ವರ್ಷಗಳಿಂದ ಝಂಡಾ ಹೂಡಿದ್ದ ಭ್ರಷ್ಟ ಅಧಿಕಾರಿ ಲಿಂಗೇಗೌಡ, ಮಂಗಳೂರು ಸೇರಿ ವಿವಿಧ ಕಡೆ ಅಪಾರ ಆಸ್ತಿ ಗಳಿಸಿದ್ದಾನೆಂಬ ಆರೋಪ ಕೇಳಿಬಂದಿತ್ತು. ಜೂನಿಯರ್ ಇಂಜಿನಿಯರ್ ಆಗಿ ಮಂಗಳೂರು ಪಾಲಿಕೆಯಲ್ಲಿ ಕರ್ತವ್ಯಕ್ಕೆ ಸೇರಿದ್ದ ಲಿಂಗೇಗೌಡ, ಬಳಿಕ ಎಇಇ ಆಗಿ ಶಿವಮೊಗ್ಗಕ್ಕೆ ವರ್ಗಾವಣೆ ಆಗಿದ್ದ. ಆದರೆ ಎರಡು ವರ್ಷದಲ್ಲಿ ಮತ್ತೆ ಮಂಗಳೂರು ಮಹಾನಗರ ಪಾಲಿಕೆಗೇ ಬಂದು ಸೇರಿದ್ದ ಲಿಂಗೇಗೌಡ, ಆನಂತರ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ಭಡ್ತಿ ಪಡೆದಿದ್ದ.


ಕಳೆದ ಎರಡು ವರ್ಷಗಳ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ದೊಡ್ಡ ಹುದ್ದೆ ಪಡೆದಿದ್ದ ಲಿಂಗೇಗೌಡ ನೇತೃತ್ವದಲ್ಲಿ ಸಾವಿರಾರು ಕೋಟಿ ರೂಪಾಯಿ ಯೋಜನೆಯ ಸ್ಮಾರ್ಟ್ ಸಿಟಿಯಲ್ಲಿ ಎಷ್ಟು ಅವ್ಯವಹಾರ ಆಗಿದೆಯೋ ಲೆಕ್ಕ ಇಲ್ಲ.
ಮಂಗಳೂರಿನ ಉರ್ವಾ ಮಾರ್ಕೆಟ್ ಬಳಿ ಸ್ವಂತ ಜಾಗ ಖರೀದಿಸಿ, ಹತ್ತು ವರ್ಷಗಳ ಹಿಂದೆಯೇ ಬಂಗಲೆ ಮಾದರಿ ಮನೆ ಕಟ್ಟಿಸಿದ್ದ ಲಿಂಗೇಗೌಡ ಮಂಗಳೂರು ಸೇರಿ ವಿವಿಧ ಕಡೆಗಳಲ್ಲಿ ಆಸ್ತಿ ಹೊಂದಿದ್ದಾನೆ. ಮೂಲತಃ ಹಾವೇರಿ ಜಿಲ್ಲೆಯ ಮೂಲದ ವ್ಯಕ್ತಿಯಾಗಿದ್ದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಝಂಡಾ ಹೂಡಿ ಅಪಾರ ಆಸ್ತಿ ಮಾಡಿಕೊಂಡ ಕೆಲವು ಭ್ರಷ್ಟ ಅಧಿಕಾರಿಗಳಲ್ಲಿ ಈತನೂ ಒಬ್ಬ.
ಕೆ.ಎಸ್.ಲಿಂಗೇಗೌಡ ವಿರುದ್ಧ 15 ವರ್ಷಗಳ ಹಿಂದೆಯೇ ಮಂಗಳೂರು ಲೋಕಾಯುಕ್ತದಲ್ಲಿ ಕೇಸು ದಾಖಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಈತನ ಮನೆಗೆ ದಾಳಿ ನಡೆಸಿ, ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದರು.
ಚಾಮರಾಜನಗರ, ಮೈಸೂರು, ಹಾಸನ ವಿಭಾಗದ ಎಸಿಬಿ ಅಧಿಕಾರಿಗಳು, ಇಬ್ಬರು ಡಿವೈಎಸ್ಪಿ ಸೇರಿ 25 ಕ್ಕೂ ಹೆಚ್ಚು ಮಂದಿ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾನಗರ ಪಾಲಿಕೆಯ ಕಚೇರಿ ಮತ್ತು ಉರ್ವಾ ಬಳಿಯ ಮನೆಯಲ್ಲಿ ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ.
Acb officers raid on Mangalore Smart City engineer Lingegowda residence, seize crores wealth. ACB officers have raided several places of Karnataka raiding Govt servant houses where crores of assets have been seized.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm