ಬ್ರೇಕಿಂಗ್ ನ್ಯೂಸ್
24-11-21 10:14 am HK news Desk ಕರಾವಳಿ
ಮಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಕೆ.ಎಸ್.ಲಿಂಗೇಗೌಡ ಎಂಬ ಅಧಿಕಾರಿಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಳೆದ 30 ವರ್ಷಗಳಿಂದ ಝಂಡಾ ಹೂಡಿದ್ದ ಭ್ರಷ್ಟ ಅಧಿಕಾರಿ ಲಿಂಗೇಗೌಡ, ಮಂಗಳೂರು ಸೇರಿ ವಿವಿಧ ಕಡೆ ಅಪಾರ ಆಸ್ತಿ ಗಳಿಸಿದ್ದಾನೆಂಬ ಆರೋಪ ಕೇಳಿಬಂದಿತ್ತು. ಜೂನಿಯರ್ ಇಂಜಿನಿಯರ್ ಆಗಿ ಮಂಗಳೂರು ಪಾಲಿಕೆಯಲ್ಲಿ ಕರ್ತವ್ಯಕ್ಕೆ ಸೇರಿದ್ದ ಲಿಂಗೇಗೌಡ, ಬಳಿಕ ಎಇಇ ಆಗಿ ಶಿವಮೊಗ್ಗಕ್ಕೆ ವರ್ಗಾವಣೆ ಆಗಿದ್ದ. ಆದರೆ ಎರಡು ವರ್ಷದಲ್ಲಿ ಮತ್ತೆ ಮಂಗಳೂರು ಮಹಾನಗರ ಪಾಲಿಕೆಗೇ ಬಂದು ಸೇರಿದ್ದ ಲಿಂಗೇಗೌಡ, ಆನಂತರ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ಭಡ್ತಿ ಪಡೆದಿದ್ದ.


ಕಳೆದ ಎರಡು ವರ್ಷಗಳ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ದೊಡ್ಡ ಹುದ್ದೆ ಪಡೆದಿದ್ದ ಲಿಂಗೇಗೌಡ ನೇತೃತ್ವದಲ್ಲಿ ಸಾವಿರಾರು ಕೋಟಿ ರೂಪಾಯಿ ಯೋಜನೆಯ ಸ್ಮಾರ್ಟ್ ಸಿಟಿಯಲ್ಲಿ ಎಷ್ಟು ಅವ್ಯವಹಾರ ಆಗಿದೆಯೋ ಲೆಕ್ಕ ಇಲ್ಲ.
ಮಂಗಳೂರಿನ ಉರ್ವಾ ಮಾರ್ಕೆಟ್ ಬಳಿ ಸ್ವಂತ ಜಾಗ ಖರೀದಿಸಿ, ಹತ್ತು ವರ್ಷಗಳ ಹಿಂದೆಯೇ ಬಂಗಲೆ ಮಾದರಿ ಮನೆ ಕಟ್ಟಿಸಿದ್ದ ಲಿಂಗೇಗೌಡ ಮಂಗಳೂರು ಸೇರಿ ವಿವಿಧ ಕಡೆಗಳಲ್ಲಿ ಆಸ್ತಿ ಹೊಂದಿದ್ದಾನೆ. ಮೂಲತಃ ಹಾವೇರಿ ಜಿಲ್ಲೆಯ ಮೂಲದ ವ್ಯಕ್ತಿಯಾಗಿದ್ದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಝಂಡಾ ಹೂಡಿ ಅಪಾರ ಆಸ್ತಿ ಮಾಡಿಕೊಂಡ ಕೆಲವು ಭ್ರಷ್ಟ ಅಧಿಕಾರಿಗಳಲ್ಲಿ ಈತನೂ ಒಬ್ಬ.
ಕೆ.ಎಸ್.ಲಿಂಗೇಗೌಡ ವಿರುದ್ಧ 15 ವರ್ಷಗಳ ಹಿಂದೆಯೇ ಮಂಗಳೂರು ಲೋಕಾಯುಕ್ತದಲ್ಲಿ ಕೇಸು ದಾಖಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಈತನ ಮನೆಗೆ ದಾಳಿ ನಡೆಸಿ, ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದರು.
ಚಾಮರಾಜನಗರ, ಮೈಸೂರು, ಹಾಸನ ವಿಭಾಗದ ಎಸಿಬಿ ಅಧಿಕಾರಿಗಳು, ಇಬ್ಬರು ಡಿವೈಎಸ್ಪಿ ಸೇರಿ 25 ಕ್ಕೂ ಹೆಚ್ಚು ಮಂದಿ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾನಗರ ಪಾಲಿಕೆಯ ಕಚೇರಿ ಮತ್ತು ಉರ್ವಾ ಬಳಿಯ ಮನೆಯಲ್ಲಿ ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ.
Acb officers raid on Mangalore Smart City engineer Lingegowda residence, seize crores wealth. ACB officers have raided several places of Karnataka raiding Govt servant houses where crores of assets have been seized.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 02:47 pm
HK News Staffer
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm