ಬ್ರೇಕಿಂಗ್ ನ್ಯೂಸ್
24-11-21 10:14 am HK news Desk ಕರಾವಳಿ
ಮಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಕೆ.ಎಸ್.ಲಿಂಗೇಗೌಡ ಎಂಬ ಅಧಿಕಾರಿಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಳೆದ 30 ವರ್ಷಗಳಿಂದ ಝಂಡಾ ಹೂಡಿದ್ದ ಭ್ರಷ್ಟ ಅಧಿಕಾರಿ ಲಿಂಗೇಗೌಡ, ಮಂಗಳೂರು ಸೇರಿ ವಿವಿಧ ಕಡೆ ಅಪಾರ ಆಸ್ತಿ ಗಳಿಸಿದ್ದಾನೆಂಬ ಆರೋಪ ಕೇಳಿಬಂದಿತ್ತು. ಜೂನಿಯರ್ ಇಂಜಿನಿಯರ್ ಆಗಿ ಮಂಗಳೂರು ಪಾಲಿಕೆಯಲ್ಲಿ ಕರ್ತವ್ಯಕ್ಕೆ ಸೇರಿದ್ದ ಲಿಂಗೇಗೌಡ, ಬಳಿಕ ಎಇಇ ಆಗಿ ಶಿವಮೊಗ್ಗಕ್ಕೆ ವರ್ಗಾವಣೆ ಆಗಿದ್ದ. ಆದರೆ ಎರಡು ವರ್ಷದಲ್ಲಿ ಮತ್ತೆ ಮಂಗಳೂರು ಮಹಾನಗರ ಪಾಲಿಕೆಗೇ ಬಂದು ಸೇರಿದ್ದ ಲಿಂಗೇಗೌಡ, ಆನಂತರ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ಭಡ್ತಿ ಪಡೆದಿದ್ದ.
ಕಳೆದ ಎರಡು ವರ್ಷಗಳ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ದೊಡ್ಡ ಹುದ್ದೆ ಪಡೆದಿದ್ದ ಲಿಂಗೇಗೌಡ ನೇತೃತ್ವದಲ್ಲಿ ಸಾವಿರಾರು ಕೋಟಿ ರೂಪಾಯಿ ಯೋಜನೆಯ ಸ್ಮಾರ್ಟ್ ಸಿಟಿಯಲ್ಲಿ ಎಷ್ಟು ಅವ್ಯವಹಾರ ಆಗಿದೆಯೋ ಲೆಕ್ಕ ಇಲ್ಲ.
ಮಂಗಳೂರಿನ ಉರ್ವಾ ಮಾರ್ಕೆಟ್ ಬಳಿ ಸ್ವಂತ ಜಾಗ ಖರೀದಿಸಿ, ಹತ್ತು ವರ್ಷಗಳ ಹಿಂದೆಯೇ ಬಂಗಲೆ ಮಾದರಿ ಮನೆ ಕಟ್ಟಿಸಿದ್ದ ಲಿಂಗೇಗೌಡ ಮಂಗಳೂರು ಸೇರಿ ವಿವಿಧ ಕಡೆಗಳಲ್ಲಿ ಆಸ್ತಿ ಹೊಂದಿದ್ದಾನೆ. ಮೂಲತಃ ಹಾವೇರಿ ಜಿಲ್ಲೆಯ ಮೂಲದ ವ್ಯಕ್ತಿಯಾಗಿದ್ದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಝಂಡಾ ಹೂಡಿ ಅಪಾರ ಆಸ್ತಿ ಮಾಡಿಕೊಂಡ ಕೆಲವು ಭ್ರಷ್ಟ ಅಧಿಕಾರಿಗಳಲ್ಲಿ ಈತನೂ ಒಬ್ಬ.
ಕೆ.ಎಸ್.ಲಿಂಗೇಗೌಡ ವಿರುದ್ಧ 15 ವರ್ಷಗಳ ಹಿಂದೆಯೇ ಮಂಗಳೂರು ಲೋಕಾಯುಕ್ತದಲ್ಲಿ ಕೇಸು ದಾಖಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಈತನ ಮನೆಗೆ ದಾಳಿ ನಡೆಸಿ, ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದರು.
ಚಾಮರಾಜನಗರ, ಮೈಸೂರು, ಹಾಸನ ವಿಭಾಗದ ಎಸಿಬಿ ಅಧಿಕಾರಿಗಳು, ಇಬ್ಬರು ಡಿವೈಎಸ್ಪಿ ಸೇರಿ 25 ಕ್ಕೂ ಹೆಚ್ಚು ಮಂದಿ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾನಗರ ಪಾಲಿಕೆಯ ಕಚೇರಿ ಮತ್ತು ಉರ್ವಾ ಬಳಿಯ ಮನೆಯಲ್ಲಿ ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ.
Acb officers raid on Mangalore Smart City engineer Lingegowda residence, seize crores wealth. ACB officers have raided several places of Karnataka raiding Govt servant houses where crores of assets have been seized.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm