ಬ್ರೇಕಿಂಗ್ ನ್ಯೂಸ್
26-11-21 10:18 am HK news Desk ಕರಾವಳಿ
ಮಂಗಳೂರು, ನ.26: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಕುಷ್ಠ ರೋಗ ವಿಭಾಗದ ವೈದ್ಯನೊಬ್ಬ ಸಹೋದ್ಯೋಗಿ ಯುವತಿಯರ ಜೊತೆ ಚಕ್ಕಂದ ಆಡುತ್ತಾ ಲೈಂಗಿಕ ಕಿರುಕುಳ ನೀಡುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ವೈದ್ಯನನ್ನು ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಸಸ್ಪೆಂಡ್ ಮಾಡಿದ್ದಾರೆ.
ವೆನ್ಲಾಕ್ ಕುಷ್ಠ ರೋಗ ವಿಭಾಗದ ವೈದ್ಯ ಡಾ. ರತ್ನಾಕರ್ ಕರ್ತವ್ಯದಿಂದ ಅಮಾನತಾಗಿರುವ ವೈದ್ಯಾಧಿಕಾರಿ. ಕಳೆದ ಹಲವು ಸಮಯದಿಂದ ಈತ ತನ್ನ ವಿಭಾಗದ ಕೆಲವು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ವಿಚಾರ ಅಲ್ಲಿನ ಇತರ ಸಿಬಂದಿಗೂ ತಿಳಿದಿತ್ತು.


ಆತನ ಜೊತೆ ಸಹಕರಿಸದೇ ಇದ್ದವರಿಗೆ ರತ್ನಾಕರ್, ಮಾನಸಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಕಿರುಕುಳಕ್ಕೆ ಒಳಗಾದವರು ಮತ್ತು ಆಸ್ಪತ್ರೆಯ ಬೇರೆ ವಿಭಾಗದ ಸಿಬಂದಿ ಸೇರಿ ಜಿಲ್ಲಾ ಆರೋಗ್ಯಧಿಕಾರಿ ಮತ್ತು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ರಾಜ್ಯ ಆರೋಗ್ಯ ಇಲಾಖೆಗೂ ದೂರು ಹೋಗಿತ್ತು.
ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಜಿಲ್ಲಾಧಿಕಾರಿಯಿಂದ ವರದಿ ಕೇಳಿದ್ದು ರಿಪೋರ್ಟ್ ನೀಡಿದ್ದರು ಎನ್ನಲಾಗಿದೆ. ವರದಿ ಆಧರಿಸಿ ಕಾಮುಕ ವೈದ್ಯನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ತಿಂಗಳ ಹಿಂದೆ ವರ್ಗಾವಣೆ ಆಗಿತ್ತು !
ಇನ್ನೊಂದು ಮೂಲದ ಪ್ರಕಾರ, ಕುಷ್ಠ ರೋಗ ವಿಭಾಗವನ್ನು ಆರು ತಿಂಗಳ ಹಿಂದೆ ಲೇಡಿಹಿಲ್ ಉಪ ವಿಭಾಗಕ್ಕೆ ಸ್ಥಳಾಂತರ ಮಾಡಲಾಗಿತ್ತು. ಅಲ್ಲಿಯೂ ಈತನ ಕಾಮ ಪುರಾಣ ಮುಂದುವರಿದಿತ್ತು. ಅಲ್ಲಿನ ಇತರ ಸಿಬಂದಿ ಇದನ್ನು ತಿಳಿದು ತೀವ್ರ ಮುಜುಗರಕ್ಕೆ ಒಳಗಾಗಿದ್ದರು. ಈ ಬಗ್ಗೆ ಜಿಲ್ಲಾ ಆರೋಗ್ಯಧಿಕಾರಿಗೆ ದೂರು ನೀಡಲಾಗಿತ್ತು ಎನ್ನುವ ಮಾಹಿತಿಗಳಿವೆ. ಇದೇ ವಿಚಾರದಲ್ಲಿ ವೈದ್ಯ ರತ್ನಾಕರನನ್ನು ತಿಂಗಳ ಹಿಂದೆ ಉತ್ತರ ಕರ್ನಾಟಕದ ಆಸ್ಪತ್ರೆ ಒಂದಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ ರತ್ನಾಕರ್ ಪ್ರಭಾವಿಯಾಗಿದ್ದು ರಾಜಕೀಯ ಒತ್ತಡದ ಮೂಲಕ ಮತ್ತೆ ಮಂಗಳೂರಿಗೆ ನಿಯೋಜನೆ ಮಾಡಿಕೊಂಡಿದ್ದ. ಮುಂದಿನ ವಾರ ಆತ ಮತ್ತೆ ಅದೇ ಜಾಗಕ್ಕೆ ಬರಲಿದ್ದಾನೆ ಎನ್ನುವ ಮಾಹಿತಿ ತಿಳಿಯುತ್ತಲೇ ಹಳೆ ಫೋಟೊ, ವಿಡಿಯೋಗಳನ್ನು ಮಾಧ್ಯಮಕ್ಕೆ ಸಿಗುವಂತೆ ಹೊರಗೆ ಬಿಟ್ಟಿದ್ದಾರೆ.
Mangalore Doctor found romancing and sexual harassing staffs at Wenlock hospital, Suspended. Dr Ratnakar is the suspended doctor. He was mentally torturing staffs to romance with me.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 02:47 pm
HK News Staffer
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm